Connect with us

Dvgsuddi Kannada | online news portal | Kannada news online

ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಿಸುವ ಆಸೆ ವ್ಯಕ್ತಪಡಿಸಿದ ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಿಸುವ ಆಸೆ ವ್ಯಕ್ತಪಡಿಸಿದ ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ಕಲಬುರಗಿ: ಅಧಿವೇಶನಕ್ಕೂ ಮುನ್ನ ಸಚಿವ ಸಂಪುಟ ವಿಸ್ತರಿಸುವ ಆಸೆ ಇದೆ. ಆದರೆ,  ಕೇಂದ್ರದ ನಾಯಕರು ಯಾವ ರೀತಿಯಾಗಿ ಸೂಚಿಸುತ್ತಾರೋ  ನೋಡಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಇಂದು ದೆಹಲಿಗೆ ಹೊರಟಿದ್ದು, ಪ್ರಧಾನಿ ಮೋದಿ ಮತ್ತು ಸಚಿವರನ್ನು ಭೇಟಿಯಾಗುತ್ತಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ಮೋದಿ ಸೇರಿದಂತೆ ಅನೇಕರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಅಭಿಪ್ರಾಯ ತೆಗೆದುಕೊಂಡು ನಂತರ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ಹೋದ ಮೇಲೆ ನಾಳೆ ಈ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಹಳಬರನ್ನು ಕೈ ಬಿಟ್ಟು, ಹೊಸಬರನ್ನು ಸೇರಿಸಿಕೊಳ್ಳುವ ಬಗ್ಗೆ ಚರ್ಚಿಸಲಾಗುವುದು.

ಇದನ್ನು ಕೇಂದ್ರ ನಾಯಕರು ನಿರ್ಧರಿಸುತ್ತಾರೆ. ಅಲ್ಲದೆ ನಾಳೆ ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top