Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಾನಗರ ಪಾಲಿಕೆಯ ಶುಲ್ಕ ಪಾವತಿಯನ್ನು ವಲಯ ಕಚೇರಿಗೂ ವಿಸ್ತರಿಸುವಂತೆ ಮನವಿ

ಪ್ರಮುಖ ಸುದ್ದಿ

ದಾವಣಗೆರೆ: ಮಹಾನಗರ ಪಾಲಿಕೆಯ ಶುಲ್ಕ ಪಾವತಿಯನ್ನು ವಲಯ ಕಚೇರಿಗೂ ವಿಸ್ತರಿಸುವಂತೆ ಮನವಿ

ಡಿವಿಜಿ ಸುದ್ದಿ, ದಾವಣಗೆರೆ : ಕೊರೊನಾ ಸಂಕಷ್ಟ ದಿನದಲ್ಲಿ  ಪಾಲಿಕೆಗೆ ಸಂಬಂಧಿಸಿದ ಶುಲ್ಕ ಪಾವತಿಸಲು ವಲಯ ಕಚೇರಿಗಳಿಗೂ ವಿಸ್ತರಿಸುವಂತೆ ಗೋ-ಗ್ರೀನ್ ಸಂಸ್ಥೆ ಮತ್ತು ರೋರ‍್ಯಾಕ್ಟ್ ಸಂಸ್ಥೆ ವತಿಯಿಂದ ಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮಹಾನಗರ ಪಾಲಿಕೆ ಕಚೇರಿಯಲ್ಲಿ ಕಂದಾಯ ಪಾವತಿ,  ಖಾತೆ ಬದಲಾವಣೆ ಸೇರಿದಂತೆ ಇತರೆ ಶುಲ್ಕ ಪಾವತಿಗೆ ಒಂದೆಡೆಯೇ ಗುಂಪು-ಗುಂಪಾಗಿ ಜನರು ಸೇರುತ್ತಿದ್ದಾರೆ. ಇದು ಅಪಾಯಕಾರಿಯಾದ ಸಂಗತಿಯಾಗಿದ್ದು  ಪಾಲಿಕೆ ಆಯಾ ವಲಯ ಕಚೇರಿಗಳಿಗೆ ಶುಲ್ಕ ಪಾವತಿಸಲು ಅವಕಾಶ ನೀಡಬೇಕು ಎಂದು ಮನವಿ ನೀಡಲಾಯಿತು.

ಶುಲ್ಕ ಪಾವತಿಯನ್ನು ವಲಯ ಕಚೇರಿಗಳಿಗೆ  ವಿಸ್ತರಿಸಿದಲ್ಲಿ ಕೆಲಸದ ವೇಗ ಹೆಚ್ಚುತ್ತದೆ ಜೊತೆಗೆ ಸಾರ್ವಜನಿಕರಿಗೂ ಅಮುಕೂಲವಾಗಲಿದೆ. ಇದು ಕೊರೊನಾ ಹರಡುವಿಕೆಯನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಆದಷ್ಟು ಬೇಗನೆ ಈ ಮನವಿಯನ್ನು ಕಾರ್ಯರೂಪಕ್ಕೆ ತರಬೇಕೆಂದು ಗೋ-ಗ್ರೀನ್ ಮತ್ತು ರೋರ‍್ಯಾಕ್ಟ್ ಸಂಸ್ಥೆ ಸದಸ್ಯರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗೋ-ಗ್ರೀನ್ ಸಂಸ್ಥೆಯ ಸಂಚಾಲಕ ಶ್ರೀಕಾಂತ ಬಗರೆ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಕೆ.ಜಿ. ಶಿವಕುಮಾರ್, ಮಹಮ್ಮದ್ ಗೌಸ್, ಸುರೇಶ್ ಕೆ.ಎನ್, ಪ್ರವೀಣ್ ಫಾರ್ಮಾ, ರೋರ‍್ಯಾಕ್ಟ್ ಸಂಸ್ಥೆ ಅಧ್ಯಕ್ಷ ಸದಾನಂದ ಜಿ., ಕಾರ್ಯದರ್ಶಿ ಚೇತನ್‌ಕುಮಾರ್ ಎ.ಎ., ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top