ದಾವಣಗೆರೆ:  ಕೃಷಿ ಯಂತ್ರೋಪಕರಣ ಸಹಾಯಧನಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಸಾಮಾನ್ಯ ವರ್ಗದ ರೈತರಿಗೆ ಮಾತ್ರ ಸಹಾಯಧನ ಲಭ್ಯವಿದ್ದು, ಉಳುಮೆಯಿಂದ ಕೊಯ್ಲುವರೆಗೆ ಉಪಯುಕ್ತವಿರುವ ವಿವಿಧ ಮಾದರಿ ಭೂಮಿ ಸಿದ್ದತೆ, ಬಿತ್ತನೆ ಉಪಕರಣಗಳು, ಅಂತರ ಬೇಸಾಯ ಉಪಕರಣಗಳು, ರೋಟೋವೇಟರ್‍ಗಳು ಎಂಜಿನ್ ಚಾಲಿತ ಸಸ್ಯ ಸಂರಕ್ಷಣಾ ಬೆಳೆ ಕಟಾವು, ಒಕ್ಕರಣೆ ಯಂತ್ರಗಳು, ತ್ಯಾಜ್ಯ ವಸ್ತುಗಳ ನಿರ್ವಹಣಾ ಉಪಕರಣಗಳು ಲಭ್ಯವಿದೆ.

ರೈತರು ಪಹಣಿ, ಆಧಾರ್‍ಕಾರ್ಡ್, ಫೋಟೋ, ಟ್ರಾಕ್ಟರ್ ಆರ್.ಸಿ. ಬುಕ್, ಬ್ಯಾಂಕ್‍ಪಾಸ್ ಬುಕ್‍ಗಳ ಪ್ರತಿಗಳನ್ನು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ನೀಡಿ ಸೌಲಭ್ಯ ಪಡೆಯಬಹುದೆಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *