Connect with us

Dvgsuddi Kannada | online news portal | Kannada news online

ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಭೂ ಸುಧಾರಣೆ, ಎಪಿಎಂಸಿ ಮಸೂದೆಗೆ ವಿಧಾನಸಭೆಯಲ್ಲಿ ಒಪ್ಪಿಗೆ

ಪ್ರಮುಖ ಸುದ್ದಿ

ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಭೂ ಸುಧಾರಣೆ, ಎಪಿಎಂಸಿ ಮಸೂದೆಗೆ ವಿಧಾನಸಭೆಯಲ್ಲಿ ಒಪ್ಪಿಗೆ

ಡಿವಿಜಿ ಸುದ್ದಿ, ಬೆಂಗಳೂರು:  ಭೂ ಸೂಧಾರಣಾ  ಹಾಗೂ ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ವಿಪಕ್ಷಗಳ ಹಾಗೂ ರೈತಪರ ಸಂಘಟನೆಗಳ ವಿರೋಧದ ನಡುವೆಯೂ ಸರ್ಕಾರ ವಿಧಾನ ಸಭೆಯಲ್ಲಿ ಒಪ್ಪಿಗೆ ಪಡೆದಿದೆ.

  • ಸರ್ಕಾರದ ವಿರುದ್ಧ ವಿಪಕ್ಷಗಳು ತೀವ್ರ ಆಕ್ರೋಶ
  • ಗದ್ದಲದ ನಡುವೆಯೂ ಧ್ವನಿ ಮತದ ಮೂಲಕ ಮಸೂದೆಗೆ ಒಪ್ಪಿಗೆ
  • ಮಸೂದೆ ವಿರೋಧಿಸಿ ಸೋಮವಾರ ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳ ಕರೆ

ಪ್ರತಿಗಳು ಹರಿದು ಹಾಕಿವಿಪಕ್ಷಗಳ ಗದ್ದಲ ಗಲಾಟೆ ಮಾಡಿದರು. ಇನ್ನು ರೈತರ ಪರ ಸಂಘಟನೆಗಳ ಪ್ರತಿಭಟನೆ ನಡುವೆಯೂ ಅಧಿವೇಶನದ ಕೊನೆಯ ದಿನವಾದ ಇಂದು ಭೂಸುಧಾರಣಾ ತಿದ್ದುಪಡಿ ವಿಧೇಯಕ ಮತ್ತು ಎಪಿಎಂಸಿ ಬಿಲ್‍ಗಳಿಗೆ ವಿಧಾನಸಭೆಯ ಒಪ್ಪಿಗೆಯನ್ನು ಸರ್ಕಾರ ಪಡೆದುಕೊಂಡಿದೆ.

ಇದಕ್ಕೂ ಮುನ್ನ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಪೋರೇಟ್ ಕಂಪನಿಗಳ ಲಾಬಿಗೆ ಮಣಿದಿರೋ ಸರ್ಕಾರ ಇದನ್ನು ಜಾರಿಗೆ ತರಲು ಮುಂದಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವೇ ಇಲ್ಲ. ಇದರಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆಪಾದಿಸಿದರು. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಈ ಕಾಯ್ದೆಯನ್ನ ತಂದರೆ 1964ರ ಹಿಂದಕ್ಕೆ ಹೋಗ್ತೇವೆ. ಇಲ್ಲಿಯವರೆಗೆ ಉಳುವವನೇ ಭೂ ಒಡೆಯ ಅನ್ನುವಂತಿತ್ತು. ಆದರೆ ಈಗ ಅದು ಉಲ್ಟಾ ಆಗಲಿದೆ. ಎಪಿಎಂಸಿಗಳು ಮುಚ್ಚಬಹುದಾದ ಆತಂಕವಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ವಿಪಕ್ಷಗಳಿಗೆ ಸ್ಪಷ್ಟನೆ ಕೊಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ, ಸಣ್ಣ ಹಿಡುವಳಿದಾರರ ಹಿತ ಕಾಯಲು ಸರ್ಕಾರ ಬದ್ಧ. ಯಾವುದೇ ಆತಂಕ ನಿಮಗೆ ಬೇಡ ಎಂದರು. ಸಚಿವ ಅಶೋಕ್ ಮಾತನಾಡಿ, ಈ ತಿದ್ದುಪಡಿ ಕಾಯ್ದೆ ತಂದಿದ್ದು ನಾವಲ್ಲ. 2004ರಲ್ಲಿ ಕಂದಾಯ ಸಚಿವರಾಗಿದ್ದವರು ಅಂದ್ರು. ಇನ್ನು ರೈತರನ್ನು ಕೇಳಿ ಎಪಿಎಂಸಿ ಬಿಲ್ ತಂದ್ರಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಕೌಂಟರ್ ಕೊಟ್ಟ ಸಚಿವ ಸಿಟಿ ರವಿ, ಲೋಕಸಭೆ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಪ್ರಸ್ತಾಪಿಸಿದ್ದನ್ನು ಎತ್ತಿ ತೋರಿಸಿದರಿ. ಈ ವೇಳೆ ಭಾರೀ ಗದ್ದಲ ನಡೀತು.

ಸಿದ್ದರಾಮಯ್ಯನವರು ಸೇರಿ ಹಲವರು ವಿಧೇಯಕ ಪ್ರತಿ ಹರಿದು ಹಾಕಿ, ಸಭಾತ್ಯಾಗ ಮಾಡಿದರು. ಇದರ ಮಧ್ಯೆಯೇ ಧ್ವನಿಮತದ ಮೂಲಕ ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆಯಿತು. ಪರಿಷತ್‍ನಲ್ಲಿಯೂ ಭೂಸುಧಾರಣೆ ಬಿಲ್‍ಗೆ ಸರ್ಕಾರ ಒಪ್ಪಿಗೆ ಪಡೆದಿದೆ. ಎಪಿಎಂಸಿ ಬಿಲ್ ಮೇಲೆ ಚರ್ಚೆ ನಡೆಯುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top