Connect with us

Dvgsuddi Kannada | online news portal | Kannada news online

ವಿಜಯದಶಮಿ ಮಹೋತ್ಸವ: ಆಟೋ ಜಾಥಾ‌

ದಾವಣಗೆರೆ

ವಿಜಯದಶಮಿ ಮಹೋತ್ಸವ: ಆಟೋ ಜಾಥಾ‌

ಡಿವಿಜಿ.ಸುದ್ದಿ.ಕಾಂ, ದಾವಣಗೆರೆ: ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಅಂಗವಾಗಿ ನಗರದ ಹೈಸ್ಕೂಲ್ ಮೈದಾನದಲ್ಲಿ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಆಟೋ ಜಾಥಾವನ್ನು ಹಿರಿಯ ಮುಖಂಡ ಕೆ.ಬಿ.ಶಂಕರನಾರಾಯಣ ಚಾಲನೆ ನೀಡಿದರು.

ಮೆರವಣಿಗೆ ಮಹನಿಯರಾದ ಬಸವಣ್ಣ, ಅಂಬೇಡ್ಕರ್, ಕುವೆಂಪು, ಭಗತ್ ಸಿಂಗ್, ಕನಕದಾಸರು, ಸ್ವಾಮಿ ವಿವೇಕಾನಂದ, ಕಿತ್ತೂರು ರಾಣಿ ಚನ್ನಮ್ಮ, ಸುಭಾಷ್ ಚಂದ್ರ ಬೋಸ್, ಒನಕೆ ಒಬವ್ವ , ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕರ ಸಾಧಕರ ಭಾವಚಿತ್ರ ಪ್ರದರ್ಶಿಸಲಾಯಿತು.

ಹೈಸ್ಕೂಲ್ ಮೈದಾನದಿಂದ ಆರಂಭಗೊಂಡು ಪಿಬಿ ರಸ್ತೆ, ಅರುಣ ಟಾಕೀಸ್, ವಿನೋಬನಗರ, ವಾಟರ್ ಟ್ಯಾಂಕ್ ಪಾರ್ಕ್, ಗುಂಡಿ ಸರ್ಕಲ್, ವಿದ್ಯಾರ್ಥಿಭವನ, ಕೆಟಿಜೆ ನಗರ, ಭಗತ್ ಸಿಂಗ್ ನಗರ, ಪಿಬಿ ರಸ್ತೆ, ಲಾಯರ್ ರಸ್ತೆ, ಜಯದೇವವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನಹ ಹೈಸ್ಕೂಲ್ ಮೈದಾನಕ್ಕೆ ಬಂದು ತಲುಪಿತು. ಈ ಸಂದರ್ಭದಲ್ಲಿ ಸತೀಶ್ ಪೂಜಾರ್, ರಾಜನಹಳ್ಳಿ ಶಿವಕುಮಾರ್, ಅಜಯ್ ಕುಮಾರ್, ಎಸ್ ಟಿ ವಿರೇಶ್, ಪಿ.ಸಿ.ಶ್ರೀನಿವಾಸ್ ಸೇರಿದಂತೆ ಮತ್ತಿತರರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top