ಡಿವಿಜಿ ಸುದ್ದಿ, ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 6 ಸೇವೆಗಳು ಸೇವಾಸಿಂಧು ಪೋರ್ಟಲ್ ವ್ಯವಸ್ಥೆಯಡಿ ನಿರ್ವಹಿಸಲಾಗುತ್ತಿದೆ.
ವಿದ್ಯಾರ್ಥಿಗಳು, ವಿಕಲಚೇತನರು, ಸ್ವಾತಂತ್ಯ್ರ ಹೋರಾಟಗಾರ ಉಚಿತ ಪಾಸ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪತಿ/ ಪತ್ನಿಯರ ಉಚಿತ ಕೂಪನ್ಸ್ ಮತ್ತು ಅಪಘಾತ ಪರಿಹಾರ ನಿಧಿಯನ್ನು ಸೇವಾ ಸಿಂಧು ಆನ್ ಲೈನ್ ಪೋರ್ಟಲ್ ನೀಡಲಾಗುತ್ತಿದೆ. ಹೀಗಾಗಿ ಅಭ್ಯರ್ಥಿಗಳು ಕಡ್ಡಾಯವಾಗಿ ಆಲ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಲ್ಲಿಸಿ ಪಾಸ್ ಪಡೆದುಕೊಳ್ಳಬೇಕು.
ಅರ್ಜಿಯಲ್ಲಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಹಾಗೂ ಅರ್ಜಿಗೆ ಸಂಬಂಧಪಟ್ಟ ದಾಖಲೆಗಳನ್ನು ಅಪಲೋಡ್ ಮಾಡಬೇಕು. ಹಾಗೂ ಭೌತಿಕವಾಗಿ ಬಸ್ಪಾಸ್ ಪಡೆಯಲು ಬಂದಾಗ ಅಗತ್ಯ ದಾಖಲಾತಿ ಹಾಗೂ ಅದರ ಜೆರಾಕ್ಸ್ ಪ್ರತಿಯನ್ನು ಕಚೇರಿಗೆ ಸಲ್ಲಿಸಿ ಪಾಸ್ ಪಡೆಯಬಹುದು ಎಂದು ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.