ಕೊರೊನಾ ವೇಳೆ ದಸರಾ; ಜಂಬೂ ಸವಾರಿ ಹೋಗಿ ಬಂಬೂ ಸವಾರಿ ಆದೀತು: ಎಚ್ .ವಿಶ್ವನಾಥ್  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಮಯದಲ್ಲಿ ಜಿಲ್ಲಾಡಳಿತ ದಸರಾ ಆಚರಿಸಲು ಹೊರಟಿದೆ. ಈ ವೇಳೆ ಎಚ್ಚರ ತಪ್ಪಿದರೆ,  ಜಂಬೂ ಸವಾರಿ ಹೋಗಿ ಬಂಬೂ ಸವಾರಿ ಆಗಿತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್. ವಿಶ್ವನಾಥ್‌ ಎಚ್ಚರಿಕೆ ನೀಡಿದರು.

ಸಾಂಕೇತಿಕವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಿದರೆ ಸಾಕು. ಯಾವುದೇ ಕಾರ್ಯಕ್ರಮ ಅವಶ್ಯಕತೆ ಇಲ್ಲ. ಎರಡು ಸಾವಿರ ಜನರ ಸೇರಿಸಲು ನಿರ್ಧರಿಸಿದ್ದಾರೆ. ಆದರೆ, ರಾಜಕೀಯದವರು, ಅಧಿಕಾರಿಗಳು, ಅವರ ಹೆಂಡತಿ, ಇವರ ಹೆಂಡತಿ, ಕುಟುಂದವರು ಸೇರಿ ಅಂದು 10 ಸಾವಿರ ಆಗುತ್ತಾರೆ. ಈಗಾಗಲೇ ಹಾಸಿಗೆಗಳು ಇಲ್ಲ ಎಂದು ಎಚ್ಚರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಯಾವುದೇ ಕಾರ್ಯಕ್ರಮ ಬೇಡ. ಈಗ ಕೋತಿ ಕುಣಿದರೂ ಸಾವಿರಾರು ಜನ ಸೇರುತ್ತಾರೆ. ಅಂಥದ್ದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರೆ ಹೆಚ್ಚು ಜನ ಸೇರುವುದಿಲ್ಲವೇ? ಏನಾದರೂ ಸಮಸ್ಯೆಯಾದರೆ ಯಾರು ಹೊಣೆ? ಮೈಸೂರು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರಿಗೆ ಅರ್ಥವಾಗುತ್ತಿಲ್ಲ. ಹಿರಿಯರಾದ  ಜಿ.ಟಿ. ದೇವೇಗೌಡ, ಎಸ್‌.ಎ. ರಾಮದಾಸ್‌, ಸಾ.ರಾ. ಮಹೇಶ್‌ ಸಲಹೆ ನೀಡಬೇಕಲ್ಲವೇ ಎಂದು ಸಲಹೆ ನೀಡಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *