ಡಿವಿಜಿ ಸುದ್ದಿ, ಬೆಂಗಳೂರು: ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಿಢೀರ್ ದಾಳಿ ಮಾಡಿದ್ದರು. ಈ ದಾಳಿ ಬೆನ್ನಲ್ಲೇ ಇಂದು ಸ್ಪಟಿಕಪುರ ಮಠದ ನಂಜಾವದೂತ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ ಶ್ರೀಗಳು, ಕೆಲ ಹೊತ್ತು ಮಾತನಾಡಿದ್ದಾರೆ. ಸಿಬಿಐ ಅಧಿಕಾರಿಗಳು ದಾಳಿ ಮುಕ್ತಾಯವಾದ ಬಳಿಕ ಅಧಿಕಾರಿಗಳು ಡಿಕೆಶಿಗೆ ಸಮನ್ಸ್ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಸೋಮವಾರ ಏಕಕಾಲದಲ್ಲಿ 14 ಕಡೆ 60ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯ ವೇಳೆ 57 ಲಕ್ಷ ಹಣ ಹಾಗೂ ಕೆಲವೊಂದು ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸಿಬಿಐ ದಾಳಿಗೆ ಕಾರಣ ಅಂತ ಡಿ.ಕೆ ಶಿವಕುಮಾರ್ ನೇರ ಆರೋಪ ಮಾಡಿದ್ದಾರೆ. ಸಿಬಿಐಗೆ ಅನುಮತಿ ಕೊಡೋದು ಬೇಡ. ಇದರ ಬಗ್ಗೆ ಐಟಿ, ಸಿಐಡಿ ತನಿಖೆ ನಡೆಸಬಹುದು ಅಂತ ಅಡ್ವೋಕೇಟ್ ಜನರಲ್ ತಿಳಿಸಿದರು ಕೂಡ ಸರ್ಕಾರ ಯಾರ ಒತ್ತಡದಿಂದ ಸಿಬಿಐ ತನಿಖೆಗೆ ಅನುಮತಿ ಕೊಟ್ಟಿದೆ ಎಂದು ಆರೋಪಿಸಿದ್ದರು.



