ಡಿವಿಜಿ ಸುದ್ದಿ, ಬೆಂಗಳೂರ: ಕಾಂಗ್ರೆಸ್ ನಾಯಕರ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ರೈತರ ಸಮಾವೇಶಕ್ಕೆ ವ್ಯಂಗ್ಯವಾಡಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ರೈತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಐದು ವರ್ಷದಲ್ಲಿ ಇನ್ನೂರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದ್ರೆ ಅಧಿಕಾರದಲ್ಲಿ ಯಾವ ನಾಯಕರು ರೈತರ ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಕೆಲಸ ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಜನತಾ ದಳ ರೈತರ ಮನೆಗಳಿಗೆ ಭೇಟಿ ನೀಡಿ ಪರಿಹಾರದ ಚೆಕ್ ನೀಡಿತು. ತದನಂತರ ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹ ಭೇಟಿ ನೀಡಿದರು. ಕೊನೆಗೆ ಕಾಂಗ್ರೆಸ್ ರಾಹುಲ್ ಗಾಂಧಿ ಕರೆತಂದು ರೈತ ಕುಟುಂಬಗಳಿಗೆ ಚೆಕ್ ವಿತರಿಸಿದರು. ಆದರೆ, ಆ ಪರಿಹಾರದ ಚೆಕ್ ನಿಂದ ಇನ್ನು ಹಣ ಬಂದಿಲ್ಲ ಎಂದರು.
ಇಂತಹ ರೈತ ಸಮಾವೇಶದಿಂದ ಅಧಿಕಾರಕ್ಕೇರಬಹುದು ಎಂಬುದು ಕಾಂಗ್ರೆಸ್ ನ ಭ್ರಮೆ . ರೈತರೇನು ಇಂತಹ ರಾಜಕೀಯ ಅರಿಯದಷ್ಟು ದಡ್ಡರಲ್ಲ ಎಂದರು.



