Connect with us

Dvgsuddi Kannada | online news portal | Kannada news online

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವಿವಿಧ ಕಡೆ ಮಳೆಯ ಅಬ್ಬರ ..!

ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವಿವಿಧ ಕಡೆ ಮಳೆಯ ಅಬ್ಬರ ..!

ಡಿವಿಜಿ ಸುದ್ದಿ, ಬೆಂಗಳೂರು:  ಸಂಜೆಯಿಂದಲೇ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಅಬ್ಬರಿಸುತ್ತಿದೆ.  ನಗರದ ರಸ್ತೆಗಳು ಕೆರೆಯಂತಾಗಿವೆ.  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ಸಂಜೆಯಿಂದಲೇ ಭಾರೀ ಮಳೆಯಾಗುತ್ತಿದೆ.

ಬೆಂಗಳೂರಿನ ಮಲ್ಲೇಶ್ವರಂ, ಶೇಷಾದ್ರಿಪುರಂ, ಸದಶಿವನಗರ, ರಾಜಾಜಿನಗರ, ಯಶವಂತಪುರ, ವಸಂತನಗರ, ಶಿವಾಜಿನಗರ ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್, ಹೆಬ್ಬಾಳ ಸೇರಿದಂತೆ ಹಲವೆಡೆ ಭಾರೀ ಮಳೆ ಆಗುತ್ತಿದೆ. ಶಿವನಾಂದ ಸರ್ಕಲ್ ಬಳಿ ಭಾರೀ ಮಳೆಯಾಗುತ್ತಿದೆ.

ಭಾರೀ ಮಳೆಗೆ ವಾಹನ ಸವಾರರು ಪರದಾಡುತ್ತಿದ್ದಾರೆ.  ಶಿವಾನಂದ ಸರ್ಕಲ್ ಬಳಿಯ ಅಂಡರ್ ಪಾಸ್ ನಲ್ಲಿ 2 ಅಡಿಯಷ್ಟು ನೀರು ನಿಂತಿದೆ. ವಿಧಾನ ಸೌದ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಕೆಲಸ ಮುಗಿಸಿ ಮನೆಯತ್ತ ಹೊರಟಿದ್ದ ಜನ ಟ್ರಾಫಿಕ್ ನಲ್ಲಿ ಸಿಲುಕಿದ್ದಾರೆ.

ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯಲ್ಲಿ ಸಂಜೆಯಿಂದಲೇ ಮಳೆಯಾಗುತ್ತಿದೆ.  ಬೆಳಗಾವಿಯ ಹುಕ್ಕೇರಿ ತಾಲೂಕಿನ ವಿವಿಧೆಡೆ 3 ಗಂಟೆಗಳ ಕಾಲ ಭಾರೀ ಮಳೆಯಾಗಿದೆ.  ಮಂಡ್ಯದ ಬೆಂಗಳೂರು-ಮೈಸೂರು ಹೆದ್ದಾರಿಯ ಮಹಾವೀರ ಸರ್ಕಲ್ ಸಂಪೂರ್ಣ ಜಲಾವೃತವಾಗಿದೆ.

ಚಿಕ್ಕಬಳ್ಳಾಪುರ ನಗರದಲ್ಲಿಯೂ ಭಾರೀ ಮಳೆಯಾಗುತ್ತಿದೆ.  ಚಿತ್ರದುರ್ಗದಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ಮಲ್ಲಾಪುರ ಕೆರೆ ಸತತ 6ನೇ ಬಾರಿಗೆ ಕೋಡಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್‍ಗೆ ನೀರು ನುಗ್ಗಿ ಭಾರೀ ಅವಾಂತರವಾಗಿದ್ದು, ಇಂದು ಕೂಡ ಮಳೆಯಾಗುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top