ಮಾಜಿ ಶಾಸಕ ಕೆ.ಮಲ್ಲಪ್ಪನವರ ನಿಧನಕ್ಕೆ ಎಸ್ ಎಸ್,  ಎಸ್ ಎಸ್ ಎಂ ಸಂತಾಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಶಾಸಕ  ಕೆ.ಮಲ್ಲಪ್ಪ ಅವರ  ನಿಧನಕ್ಕೆ ಮಾಜಿ ಸಚಿವ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಲ್ಲಪ್ಪನವರು ಸರಳ ಸಜ್ಜನಿಕೆಯ ಒಬ್ಬ ಆದರ್ಶ ರಾಜಕಾರಣಿ, ಒಬ್ಬ ಧೀಮಂತ ಹಿಂದುಳಿದ ವರ್ಗಗಳ ನಾಯಕರಾಗಿದ್ದು,  ದೇವರಾಜ್ ಅರಸ್ ಅವರ ಅಪ್ಪಟ್ಟ ಅಭಿಮಾನಿಗಳಾಗಿ ಅವರ ಹಾಕಿದ್ದ ಮಾರ್ಗದರ್ಶನದಲ್ಲೇ ನಡೆಯುತ್ತಿದ್ದರು.  ಮಲ್ಲಪ್ಪನವರ ನಿಧನ ದಾವಣಗೆರೆ ಜಿಲ್ಲೆಗೆ ತುಂಬಲಾರದ ನಷ್ಟ ಎಂದು ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಕಂಬನಿ ಮಿಡಿದಿದ್ದಾರೆ.

shamnuru shivashankarappa dvgsuddi

ಅಪ್ಪಟ ಗಾಂಧಿವಾದಿ, ಸಾವಿರಾರು ಕ್ರೀಡಾಪಟುಗಳ ಪ್ರೋತ್ಸಾಹಕರಾಗಿದ್ದ, ನಮ್ಮೆಲ್ಲರ ಮಾರ್ಗದರ್ಶಕರಾಗಿದ್ದ ಹಿರಿಯ ಮುತ್ಸದ್ದಿ ರಾಜಕಾರಣಿ ಮಾಜಿ ಶಾಸಕ  ಕೆ.ಮಲ್ಲಪ್ಪನವರಂತಹ ಸರಳ ಸಜ್ಜನಿಕೆಯ ರಾಜಕಾರಣಿಯನ್ನು ಕಳೆದುಕೊಂಡಿರುವುದು ತುಂಬಾ ದುಃಖಕರ ಎಂದು ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ss mallikarjun

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *