Connect with us

Dvgsuddi Kannada | online news portal | Kannada news online

ಸದ್ಯಕ್ಕೆ ಶಾಲೆ ಓಪನ್ ಇಲ್ಲ, ನವೆಂಬರ್ ನಲ್ಲಿ ಕಾಲೇಜ್ ಓಪನ್ : ಡಿಸಿಎಂ ಅಶ್ವತ್ಥ್ ನಾರಾಯಣ್

ಪ್ರಮುಖ ಸುದ್ದಿ

ಸದ್ಯಕ್ಕೆ ಶಾಲೆ ಓಪನ್ ಇಲ್ಲ, ನವೆಂಬರ್ ನಲ್ಲಿ ಕಾಲೇಜ್ ಓಪನ್ : ಡಿಸಿಎಂ ಅಶ್ವತ್ಥ್ ನಾರಾಯಣ್

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,  ಶಾಲಾ-ಕಾಲೇಜ್ ಸದ್ಯಕ್ಕೆ ಆರಂಭವಾಗುತ್ತಿಲ್ಲ. ಆದರೆ ನವೆಂಬರ್‌ನಲ್ಲಿ ಕಾಲೇಜು ಪ್ರಾರಂಭ ಮಾಡಲು ಚಿಂತನೆ ಇದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ನಗರದಲ್ಲಿ ಪ್ರತಿಭಟನಾ ನಿರತ ಪಿಯುಸಿ ಉಪನ್ಯಾಸಕ ಅಭ್ಯರ್ಥಿ ಭೇಟಿ ಮಾಡಿದ ನಂತರ ಮಾತನಾಡಿ,  ಕೊರೊನಾ ಇದ್ದರು ಕೌನ್ಸಿಲಿಂಗ್ ನಡೆಯುತ್ತಿದೆ. ವಿಶೇಷವಾಗಿ ನಿಮಗೆ ಮಾತ್ರ ಕೊರೊನಾ ಸಮಯದಲ್ಲಿ ಕೌನ್ಸಿಲಿಂಗ್ ಮಾಡಲಾಗಿದೆ. ಆದರೆ ಆದೇಶ ಪತ್ರದ ಬಗ್ಗೆ ಯಾರಿಗೂ ಆತಂಕ ಬೇಡ. ಸಿಎಂ ಭರವಸೆ ನೀಡಿದ್ದು, ಕಾಲೇಜು ಪ್ರಾರಂಭ ಆದ ಕೂಡಲೇ ಆದೇಶದ ಪ್ರತಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಪ್ರತಿಭಟನಾ ನಿರತ ಉಪನ್ಯಾಸಕರು ಸಚಿವರ ಮಾತಿಗೆ ಒಪ್ಪಲಿಲ್ಲ .  ನಮಗೆ ಆದೇಶದ ಪ್ರತಿ ಕೊಡಿ. ಅಲ್ಲಿಯವರೆಗೆ ನಾವು ಇಲ್ಲಿಂದ ಹೋಗುವುದಿಲ್ಲ. ನಮ್ಮ ಜೀವನ ದುಸ್ಥರವಾಗಿದೆ ಎಂದು ಒತ್ತಾಯ ಮಾಡಿದರು.

ನವೆಂಬರ್ ನಲ್ಲಿ ಕಾಲೇಜು ಪ್ರಾರಂಭದ ಚಿಂತನೆ ಇದೆ. ಸಿಎಂ ಅವರೊಂದಿಗೆ ಮುಂದಿನ ವಾರ ಸಭೆ ಇದ್ದು, ಅಲ್ಲಿ ಕಾಲೇಜು ಪ್ರಾರಂಭದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top