ಡಿವಿಜಿ ಸುದ್ದಿ, ಬಾಗಲಕೋಟೆ: ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಬಿಜೆಪಿಗರೇ ಯತ್ನಿಸುತ್ತಿದ್ದಾರೆ. ನಾವಂತೂ ಸರ್ಕಾರ ಬೀಳಿಸುವ ಕೆಲಸಕ್ಕೆ ಕೈ ಹಾಕಲ್ಲ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಯಡಿಯೂರಪ್ಪ ಬಹಳ ದಿನ ಸಿಎಂ ಆಗಿ ಇರುವುದಿಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ಹಿನ್ನೆಲೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿಯವರ ಆಂತರಿಕ ತಿಕ್ಕಾಟದಿಂದ ಸಕಾ೯ರ ಬಿದ್ದು ಹೋದರೆ, ನಾವು ಚುನಾವಣೆ ಎದುರಿಸಲು ಸಿದ್ಧ ಎಂದರು.
ಉತ್ತರ ಕನಾ೯ಟಕ ಭಾಗದವರು ಸಿಎಂ ಆಗಲಿದ್ದಾರೆ ಎಂಬ ಯತ್ನಾಳ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಅವರ ಪಕ್ಷದ ವಿಚಾರ, ನಾನೇಕೆ ಮಾತನಾಡಲಿ, ಯಡಿಯೂರಪ್ಪ ಆ ಬಗ್ಗೆ ಮಾತನಾಡಲಿ ಎಂದು ಹೇಳಿದರು. ಯತ್ನಾಳ ಅವರ ಕ್ಷೇತ್ರದ ಅನುದಾನ ಕಡಿತಗೊಂಡ ನಂತರ ಅವರಲ್ಲಿ ಸಿಎಂ ಬಗ್ಗೆ ಅಸಮಾಧಾನವಾಗಿದೆ. ಪಾಪ ಅವರಿಗೂ ಈಗ ಬಿಸಿ ಮುಟ್ಟಿದೆ ಎಂದು ಹೇಳಿದರು.



