Connect with us

Dvgsuddi Kannada | online news portal | Kannada news online

ಹಬ್ಬದ ವೇಳೆ ಕೊರೊನಾ ಬಗ್ಗೆ ಮೈಮರೆಯಬೇಡಿ: ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರ ಸುದ್ದಿ

ಹಬ್ಬದ ವೇಳೆ ಕೊರೊನಾ ಬಗ್ಗೆ ಮೈಮರೆಯಬೇಡಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಸಾಲು ಸಾಲು ಹಬ್ಬಗಳು ಬಂದಿವೆ.  ಈ ಸಮಯದಲ್ಲಿ ಕೊರೊನಾ ವೈರಸ್ ನಿಂದ  ಅತ್ಯಂತ ಎಚ್ಚರಿಕೆಯಿಂದ ಹಬ್ಬ ಆಚರಿಸಿ.  ಹಬ್ಬಗಳು ನಿಮ್ಮಲ್ಲಿ ಉತ್ಸಾಹ ಮತ್ತು ಸಂತೋಷ ತರಲಿ ಎಂದು ಆಶಿಸುತ್ತೇನೆ. ಆದರೆ,  ಮಾಸ್ಕ್ ಸೇರಿದಂತೆ ಎಲ್ಲ ಕೊರೊನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ ಕೊರೊನಾ ತಡೆಗೆ ಸಹಕರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಇಂದು ಸಂಜೆ ದೇಶವನ್ನುದ್ದೇಶಿಸಿ ಮಾತನಾಡಿದ ಅವರು,  ಕೊರೊನಾ ಸೋಂಕಿತರ ಸಂಖ್ಯೆ ಇಳಿ ಮುಖವಾಗುತ್ತಿರುವುದು ಸಂತಸದ ವಿಷಯ.  ಲಾಕ್‍ಡೌನ್ ಬಳಿಕ ಪ್ರಧಾನಿ ಅವರ  ಏಳನೇ ಭಾಷಣ ಇದಾಗಿತ್ತು.ಜನತಾ ಕರ್ಫ್ಯೂ ಬಳಿಕ ಇಂದಿನವರೆಗೆ ಹಲವು ಸಂಕಷ್ಟಗಳನ್ನು ಎದುರಿಸಿದ್ದೇವೆ. ಕೊರೊನಾ ನಡುವೆ ಜೀವನ ನಿರ್ವಹಣೆಗಾಗಿ ಜನರು ಮನೆಯಿಂದ ಹೊರ ಬರುತ್ತಿದ್ದಾರೆ. ಕೊರೊನಾಗೆ ವ್ಯಾಕ್ಸಿನ್ ಸಿಗೋವರೆಗೂ ಎಲ್ಲ ನಿಯಮಗಳನ್ನ ಪಾಲಿಸಬೇಕು. ವಿದೇಶಗಳು ಸೇರಿದಂತೆ ದೇಶದಲ್ಲಿ ಕೊರೊನಾ ವ್ಯಾಕ್ಸಿನ್ ಗಾಗಿ ಸಂಶೋಧನೆಗಳು ನಡೆಯುತ್ತಿವೆ. ವ್ಯಾಕ್ಸಿನ್ ಸಿದ್ಧವಾದ ಕೂಡಲೇ ಅದನ್ನ ಪ್ರತಿ ದೇಶವಾಸಿಗೆ ಹೇಗೆ ತಲುಪಿಸಬೇಕು ಎಂಬುದರ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ.

ಲಾಕ್‍ಡೌನ್ ತೆರವು ಆಗಿರಬಹುದು. ಆದರೆ, ವೈರಸ್ ಹೋಗಿಲ್ಲ. ಕಳೆದ ಎಂಟು ದಿನಗಳಿಂದ ಕಾಪಾಡಿಕೊಂಡ ಸ್ಥಿತಿಯನ್ನ ಮುಂದೆ ಹಾಳು ಮಾಡಿಕೊಳ್ಳಬಾರದು. ಭಾರತದಲ್ಲಿ ಕೊರೊನಾ ಗುಣಮುಖ ಪ್ರಮಾಣ ಶೇ.83ರಷ್ಟಿದೆ. ಅಭಿವೃದ್ಧಿ ರಾಷ್ಟ್ರಗಳಲ್ಲಿ ಕೊರೊನಾ ಮರಣ ಪ್ರಮಾಣ ಹೆಚ್ಚಿದ್ದು, ನಮ್ಮಲ್ಲಿ ಕಡಿಮೆ ಇದೆ. ದೇಶದ 2 ಸಾವಿರ ಲ್ಯಾಬ್ ಗಳಲ್ಲಿ ಕೊರೊನಾ ಟೆಸ್ಟ್ ಮಾಡಲಾಗ್ತಿದೆ. 90 ಲಕ್ಷದಷ್ಟು ಬೆಡ್ ಗಳ ವ್ಯವಸ್ಥೆ ದೇಶದಲ್ಲಿದೆ. ಭಾರತದಲ್ಲಿ ನಾಗರೀಕರ ಜೀವ ಉಳಿಸುವಲ್ಲಿ ಸರ್ಕಾರ ಸಫಲವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಬೇಜಾವಾಬ್ದಾರಿತನ ತೋರಿಸಬಾರದು. ನಿರ್ಲಕ್ಷ್ಯ ನಿಮ್ಮನ್ನು ಅಪಾಯಕ್ಕೆ ದೂಡಬಹುದು. ಭಾರತದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗ್ತಿದೆ.ಪೂರ್ಣ ಪ್ರಮಾಣದಲ್ಲಿ ಸಫಲತೆ ಸಿಗದೇ ಖುಷಿ ಪಡೋದು ಸರಿಯಲ್ಲ. ಕೆಲಸ ಪೂರ್ಣವಾಗದೇ ಸಂತೋಷಪಡೋದು ಒಳ್ಳೆಯದಲ್ಲ  ಎಂದರು. ಈ  ವೇಳೆ ದೇಶದ ಜನತೆಗೆ ದಸರಾ, ನವರಾತ್ರಿ, ಈದ್, ಗುರುನಾನಕ, ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top