ಡಿವಿಜಿ ಸುದ್ದಿ, ಬಳ್ಳಾರಿ: ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಶಕ್ತಿದೇವತೆ ಉಚ್ಚಂಗೆಮ್ಮನ ದೇವಸ್ಥಾನದಲ್ಲಿ ಈ ಬಾರಿ ಸರಳ ದಸರಾ ಆಚರಿಸಲಾಗುತ್ತಿದೆ. ಅಕ್ಟೋಬರ್ 17 ರಂದು ಶನಿವಾರ ದೇವಿಯ ಪೂಜೆಯೊಂದಿಗೆ ಸರಳ ದಸರಾಕ್ಕೆ ಚಾಲನೆ ದೊರೆಯಿತು. ಭಾನುವಾರ ಹೂವಿನ ಅಲಂಕಾರ ಹಾಗೂ ಸೋಮವಾರ ತೆಂಗಿನ ಕಾಯಿ, ಮಂಗಳವಾರ ಬಾಳೆಹಣ್ಣಿನಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.ಪ್ರತಿ ವರ್ಷ ವಿದ್ಯುತ್ ದೀಪಗಳಿಂದ ದೇವಿಯನ್ನು ಅಲಂಕಾರ ಮಾಡಲಾಗುತ್ತಿತ್ತು ಕರೋನ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಯಾವುದೇ ವೈಭವದ ಅಲಂಕಾರ ಮಾಡದೇ ಸರಳ ದಸರಾ ಆಚರಣೆಗೆ ತಾಲ್ಲೂಕು ಆಡಳಿತ ಕ್ರಮ ಕೈಗೊಂಡಿದೆ.
ಉಚ್ಚಂಗಿದುರ್ಗ: ಸರಳ ದಸರಾ; ದೇವಿಗೆ ವಿಶೇಷ ಬಾಳೆ ಹಣ್ಣಿನ ಅಲಂಕಾರ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment