ಡಿವಿಜಿ ಸುದ್ದಿ, ವಿಜಯಪುರ: ಸಿಎಂ ಯಡಿಯೂರಪ್ಪ ವಿರುದ್ಧ ಪದೇ ಪದೇ ಅಸಮಾಧಾನ ವ್ಯಕ್ತಪಡಿಸುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮತ್ತೆ ಹರಿಹಾಯ್ದಿದ್ದು, ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ ಎಂದು ಯಡಿಯೂರಪ್ಪ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.
https://twitter.com/BRPatil_BJP/status/1318744903975800832?ref_src=twsrc%5Etfw%7Ctwcamp%5Etweetembed%7Ctwterm%5E1318744903975800832%7Ctwgr%5Eshare_3%2Ccontainerclick_0&ref_url=https%3A%2F%2Fpublictv.in%2Fmla-basangouda-patil-yatnal-attack-on-cm-bs-yediyurappa-and-govt-vijayapura
ಟ್ವೀಟ್ ಮೂಲಕ ಮತ್ತೆ ಅಸಮಾಧಾನ ಹೊರಹಾಕಿರುವ ಯತ್ನಾಳ್, ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ. ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ. ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನವೂ ಅಲ್ಲ ಎಂದು ಬರೆದುಕೊಂಡಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬಹಳ ದಿನ ಉಳಿಯಲ್ಲ ಎಂದು ಸಿಎಂ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದರು. ಯತ್ನಾಳ್ ಹೇಳಿಕೆ ಬಿಜೆಪಿಗರು ಮಾತ್ರವಲ್ಲದೆ, ವಿಪಕ್ಷಗಳಲ್ಲಿಯೂ ಸಾಕಷ್ಟು ಚರ್ಚೆಯಾಗಿತ್ತು. ಸಿಎಂ ಬಿ.ಎಸ್ವೈ ಅವರಿಗೂ ಈ ಹೇಳಿಕೆ ಇರಿಸು ಮುರಿಸು ಉಂಟು ಮಾಡಿತ್ತು.



