ಡಿವಿಜಿ ಸುದ್ದಿ, ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಭಾಗ್ಯಲಕ್ಷ್ಮಿ ಯೋಜನೆಯ ಬಾಂಡ್ ಗಳು ಇನ್ಮುಂದೆ ಎಲ್ ಐಸಿ ಬದಲು ಅಂಚೆ ಇಲಾಖೆ ಸುಕನ್ಯಾ ಸಮೃದ್ಧಿ ಮೂಲಕ ಜಾರಿಯಾಗಲಿದೆ.
ಇಂದು ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ಹೀಗಾಗಿ ಈ ಯೋಜನೆಗೆ ಇನ್ಮುಂದೆ ಎಲ್ಐಸಿ ಬದಲು ಅಂಚೆ ಇಲಾಖೆ ಅಧಿಕೃತ ಏಜೆನ್ಸಿಯಾಗಿರುತ್ತದೆ. ಈ ಕುರಿತು ಸರ್ಕಾರ ಇದೀಗ ಸಚಿವ ಸಂಪುಟದ ಒಪ್ಪಿಗೆ ನೀಡಿದೆ.

ಯೋಜನೆಯನ್ನು ಮರು ವಿನ್ಯಾಸಗೊಳಿಸಿ ಜಾರಿ ಮಾಡುವುದರಿಂದ ಫಲಾನುಭವಿಗಳಿಗೆ ಯಾವುದೇ ನಷ್ಟವಾಗುವುದಿಲ್ಲ. ಸರ್ಕಾರದ ಭರವಸೆಯಂತೆ ಹೆಣ್ಣು ಮಗುವಿಗೆ 18 ವರ್ಷ ತುಂಬಿದಾಗ 1 ಲಕ್ಷ ಸಿಗುತ್ತದೆ. ಭಾರತೀಯ ಜೀವ ವಿಮಾ ನಿಗಮವು ಈ ಹಿಂದೆ ಒಪ್ಪಂದ ಮಾಡಿಕೊಂಡಂತೆ ಬಾಂಡ್ ಮುಚ್ಯುರಿಟಿ ಆದ ಬಳಿಕ 1 ಲಕ್ಷ ಪಾವತಿ ಮಾಡಲು ತಕರಾರು ಮಾಡುತ್ತಲೇ ಇತ್ತು. ಆ ಕಾರಣಕ್ಕೆ ಭಾಗ್ಯಲಕ್ಷ್ಮಿ ಯೋಜನೆಯನ್ನು ಸುಕನ್ಯ ಸಮೃದ್ಧಿಗೆ ವರ್ಗಾಯಿಸಲಾಗಿದೆ.
ಬಿಪಿಎಲ್ ಕುಟುಂಬದಲ್ಲಿ ಹೆಣ್ಣು ಮಕ್ಕಳು ಜನಿಸಿದರೆ ಅವರಿಗೆ ಬಾಂಡ್ ನೀಡುವ ಯೋಜನೆ ಇದಾಗಿದೆ. ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆಯನ್ನು ಜಾರಿಗೆ ತಂದಿದ್ದರು.



