Connect with us

Dvgsuddi Kannada | online news portal | Kannada news online

ಮಳೆಹಾನಿ: 10,000 ಕೋಟಿ ಪ್ಯಾಕೇಜ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ;  ಪ್ರತಿ ಹೇಕ್ಟರ್ ಬೆಳೆ ಹಾನಿಗೆ 10 ಸಾವಿರ

ರಾಷ್ಟ್ರ ಸುದ್ದಿ

ಮಳೆಹಾನಿ: 10,000 ಕೋಟಿ ಪ್ಯಾಕೇಜ್ ಘೋಷಿಸಿದ ಮಹಾರಾಷ್ಟ್ರ ಸರ್ಕಾರ;  ಪ್ರತಿ ಹೇಕ್ಟರ್ ಬೆಳೆ ಹಾನಿಗೆ 10 ಸಾವಿರ

ಮುಂಬೈಭಾರೀ ಮಳೆಯಿಂದ ತತ್ತರಿಸಿದ ಮಹಾರಾಷ್ಟದ ಜನರಿಗೆ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ 10,000 ಕೋಟಿ ಪರಿಹಾರ ಪ್ಯಾಕೇಜ್‌ ಘೋಷಿಸಿದ್ದು, ರೈತರಿಗೆ ಬೆಳೆ ಹಾನಿ ಪರಿಹಾರವಾಗಿ ಪ್ರತಿ ಹೇಕ್ಟರ್ ಗೆ 10 ಸಾವಿರ ರೂಪಾಯಿ ನೀಡಲಿದ್ದಾರೆ.

ಈ ಬಾರಿಯ ಭಾರೀ ಪ್ರಮಾಣದ ಮುಂಗಾರು ಮಳೆಯಿಂದಾಗಿ ರಾಜ್ಯದಲ್ಲಿ ಬೆಳೆ ನಷ್ಟ, ಜೀವಹಾನಿ ಹಾಗೂ ಮನೆ, ಕಟ್ಟಡಗಳು, ರಸ್ತೆಗಳಿಗೆ ಆಗಿದ್ದವು.  ಹಾನಿಯ ಪ್ರದೇಶಕ್ಕೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಇತ್ತೀಚೆಗಷ್ಟೇ ಪರಿಶೀಲನೆ ನಡೆಸಿದ್ದರು. ಇದೀಗ ಮಹಾರಾಷ್ಟ್ರ ಸರ್ಕಾರ 10,000 ಕೋಟಿ ಪರಿಹಾರ ಪ್ಯಾಕೇಜ್‌ ಘೋಷಿಸಿದ್ದು,  ಪಶ್ಚಿಮ ಮತ್ತು ಮಧ್ಯ ಭಾಗದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುಮಾರು 7 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟ ಉಂಟಾಗಿದೆ. ಪರಿಹಾರ ಮೊತ್ತ ದೀಪಾವಳಿಗೂ ಮುನ್ನವೇ ವಿತರಣೆಯಾಗಲಿದೆ ಎಂದು ಉದ್ಧವ್ ಠಾಕ್ರೆ ಘೋಷಿಸಿದ್ದಾರೆ.

ಸೋಲಾಪುರ್‌, ಸಾಂಗ್ಲಿ, ಕೋಲ್ಹಾಪುರ್‌, ಸತಾರಾ, ಉಸ್ಮಾನಾಬಾದ್‌, ಬೀಡ್‌, ಔರಂಗಬಾದ್‌ ಹಾಗೂ ಲಾತುರ್‌ನಲ್ಲಿ ತೀವ್ರ ಮಳೆಯಿಂದ ಹಾನಿಯಾಗಿದ್ದು, ಸೋಯಾ ಬೀನ್‌, ಹತ್ತಿ, ಕಬ್ಬು, ದಾಳಿಂಬೆ ಸೇರಿದಂತೆ ಹಲವು ಬೆಳೆಗಳು ನೆಲಕಚ್ಚಿವೆ. ಶೀಘ್ರದಲ್ಲಿಯೇ ಪರಿಹಾರ ಬಿಡುಗಡೆ ಮಾಡುವಂತೆ ಸರ್ಕಾರ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top