Connect with us

Dvgsuddi Kannada | online news portal | Kannada news online

ದಾವಣಗೆರೆ: ದೇಶದಲ್ಲಿ ರೈತ ವಿರೋಧಿ ಆಡಳಿತ ನಡೆಯುತ್ತಿದೆ; ಶಿವಗಂಗಾ ಬಸವರಾಜ್

ದಾವಣಗೆರೆ

ದಾವಣಗೆರೆ: ದೇಶದಲ್ಲಿ ರೈತ ವಿರೋಧಿ ಆಡಳಿತ ನಡೆಯುತ್ತಿದೆ; ಶಿವಗಂಗಾ ಬಸವರಾಜ್

ಡಿವಿಜಿ ಸುದ್ದಿ, ದಾವಣಗೆರೆ: ದೇಶದಲ್ಲಿ ಜನ ಮತ್ತು  ರೈತ ವಿರೋಧಿ ಆಡಳಿತ ನಡೆಯುತ್ತಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ವಿ . ಶಿವಗಂಗಾ ಹೇಳಿದರು.

ನಗರದ ಜಯದೇವ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಿಸಾನ್ ಕಾಂಗ್ರೆಸ್ ದಿವಸವನ್ನು ಆಚರಿಸಿ ಪ್ರತಿಭಟಿಸಲಾಯಿತು. ಈ ವೇಳೆ ಮಾತನಾಡಿದ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ವಿ ಶಿವಗಂಗಾ,  ದೇಶದಲ್ಲೇ ಜನ ವಿರೋಧಿ ಹಾಗೂ ರೈತ ವಿರೋಧಿ ಆಡಳಿತ ನಡೆಯುತ್ತಿದೆ. ದೇಶದ ರಾಜಕೀಯ ಇತಿಹಾಸದಲ್ಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಕೆಟ್ಟ ಹಾಗೂ ದುರಾಡಳಿ ನಡೆಸುತ್ತಿದೆ ಎಂದರು.

ಭೂ ಸುಧಾರಣೆ, ವಿದ್ಯುತ್ ಬಿಲ್, ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದು ರೈತರಿಗೆ ಸಂಕಷ್ಟ ತಂದಿದ್ದಾರೆ. ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ.ರೈತರ ಜಮೀನು ಖಾಸಗಿಯವರಿಗೆ ನೀಡಿ ಕೃಷಿಯನ್ನೇ ನಿರ್ಮೂಲನೆಗೆ ಮುಂದಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ ಮಾತನಾಡಿ,  ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಶ್ರೀಮಂತರು, ಉದ್ಯಮಿಗಳ ಪರ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆ. ಆಧುನೀಕರಣ ಹೆಸರಲ್ಲಿ ದೇಶವನ್ನೇ ಮಾರಾಟಕ್ಕೆ ಯತ್ನಿಸಲಾಗುತ್ತಿದೆ.ಕೋವಿಡ್ ಹೆಸರಲ್ಲಿ ದೊಡ್ಡ ಭ್ರಷ್ಟಾಚಾರ ನಡೆಯುತ್ತಿದೆ.ಪಾರದರ್ಶಕ ಆಡಳಿತವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ದಿನೇಶ್ ಕೆ. ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಮುದ್ದೆಗೌಡರ ಗಿರೀಶ್ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರು ಸೇರಿದಂತ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top