ಜೈಪುರ: ಕೊರೊನಾ ವೈರಸ್ ಹಿನ್ನೆಲೆ ಈ ಬಾರಿ ದೀಪಾವಳಿ ಹಬ್ಬದ ಪಟಾಕಿ ಮಾರಾಟವನ್ನು ರಾಜಸ್ಥಾನ ಸರ್ಕಾರ ನಿಷೇಧಿಸಿದೆ.
ಕೊರೊನಾ ಸಂಕಷ್ಟ ಸಮಯದಲ್ಲಿ ಜನರ ಜೀವ ಉಳಿಸುವುದು ಸರ್ಕಾರಕ್ಕೆ ಬಹು ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಪಟಾಕಿ ಮಾರಾಟ ಮತ್ತು ಫಿಟ್ನೆಸ್ ಪ್ರಮಾಣ ಪತ್ರವಿಲ್ಲದೆ ಸಂಚರಿಸುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇಂಥ ಸಂದರ್ಭದಲ್ಲಿ ಜನರು ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಬಾರದು ಎಂದು ಗೆಹ್ಲೋಟ್ ಹೇಳಿದ್ದಾರೆ.



