Connect with us

Dvgsuddi Kannada | online news portal | Kannada news online

ಗ್ರಾಮಾಂತರ ಪೊಲೀಸ್ ಕಾರ್ಯಾಚರಣೆ: 4 ಅಂತರ್ ಜಿಲ್ಲಾ ಕಳ್ಳರ ಬಂಧನ

ದಾವಣಗೆರೆ

ಗ್ರಾಮಾಂತರ ಪೊಲೀಸ್ ಕಾರ್ಯಾಚರಣೆ: 4 ಅಂತರ್ ಜಿಲ್ಲಾ ಕಳ್ಳರ ಬಂಧನ

ಡಿವಿಜಿಸುದ್ದಿ.ಕಾಂ, ದಾವಣಗೆರೆ : ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ಅಡ್ಡ ಹಾಕಿ ಹಣ ದೋಚುತ್ತಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಲಾರಿ ಚಾಲಕ ಅನೀಲ್ ಕುಮಾರ್, ಭರಮಸಾಗರ ಮೂಲದ ದಿನೇಶ್, ರಾಕೇಶ್, ಲೋಹಿತ್ ಬಂಧಿತರು. ಬಂಧಿತರಿಂದ 1.34 ಲಕ್ಷ ರೂಪಾಯಿ ಸೇರಿದಂತೆ, ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ.

ಆ.1 ರಂದು ದಾವಣಗೆರೆ ತಾಲೂಕಿನ ಆನಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿ ಅಡ್ಡ ಗಟ್ಟಿ ಕಳ್ಳತನ ಮಾಡಿದ ಕಳ್ಳರು.ಚಾಲಕ‌ ಅನಿಲ್ ಪ್ಲಾನ್‌ ನಂತೆ ಆನಗೋಡು ಸಮೀಪ ಬೈಕ್ ನಲ್ಲಿ ಬಂದ ಮೂವರು ಲಾರಿ ಅಡ್ಡಗಟ್ಟಿ, ಕ್ಯಾಷಿಯರ್ ವಿನಾಯಕ ಎಂಬುವವರಿಗೆ ಖಾರದ ಪುಡಿ ಎರಚಿ, ಹಲ್ಲೆ ಮಾಡಿ ಹಣದ ಬ್ಯಾಗ್ ಕಿತ್ತು ಪರಾರಿಯಾಗಿದ್ದರು.

ಘಟನೆ ನಂತರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಚಾಲಕ ಅನಿಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top