ಡಿವಿಜಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪಮತ್ತು ಕುಟುಂಬ ಸದಸ್ಯರವಿರುದ್ಧ ದಾಖಲಾಗಿದ್ದಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ಮೂರು ಪ್ರಕರಣಗಳನ್ನು ವಕೀಲಬಿ.ವಿನೋದ್ ವಾಪಸ್ ಪಡೆದಿದ್ದಾರೆ.
ಶಿವಮೊಗ್ಗದ ವಕೀಲ ಬಿ. ವಿನೋದ್ ಅವರು ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿದ್ದರು. ಆದರೆ ಇಂದು ಬೆಳಗ್ಗೆ ದಿಢೀರ್ ಆಗಿ ಮೂರು ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ. ಈ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಇತ್ತೊಂದು ಸಂಕಷ್ಟ ನಿವಾರಣೆ ಆದಂತಾಗಿದೆ.



