Connect with us

Dvgsuddi Kannada | online news portal | Kannada news online

ಪತ್ರಕರ್ತ ಅರ್ನಾಬ್ ಗೋಸ್ವಾಮಿ ಬಂಧನ; ಪತ್ರಿಕಾ ಸ್ವಾತಂತ್ರ್ಯ ಹರಣ: ಗೃಹ ಸಚಿವ ಅಮಿತ್ ಷಾ

ರಾಷ್ಟ್ರ ಸುದ್ದಿ

ಪತ್ರಕರ್ತ ಅರ್ನಾಬ್ ಗೋಸ್ವಾಮಿ ಬಂಧನ; ಪತ್ರಿಕಾ ಸ್ವಾತಂತ್ರ್ಯ ಹರಣ: ಗೃಹ ಸಚಿವ ಅಮಿತ್ ಷಾ

ನವದೆಹಲಿ: ಪತ್ರಕರ್ತ ಅರ್ನಾಬ್​ ಗೋಸ್ವಾಮಿ ಬಂಧನವನ್ನು ಕೇಂದ್ರ ಗೃಹಸಚಿವ ಅಮಿತ್ ಷಾ ಖಂಡಿಸಿದ್ದು, ಮಹಾರಾಷ್ಟ್ರ ಸರ್ಕಾರದಿಂದ ಪತ್ರಿಕಾ ಸ್ವಾತಂತ್ರ್ಯ ಹರಣ ನಡೆದಿದೆ ಎಂದು  ಆಕ್ರೋಶ  ವ್ಯಕ್ತಪಡಿಸಿದ್ದಾರೆ.

2 ವರ್ಷದ ಹಳೆಯ  ಪ್ರಕರಣಕ್ಕೆ ಸಬಂಧಿಸಿದಂತೆ ಮಹಾರಾಷ್ಟ್ರದ ಪೊಲೀಸರು ಪತ್ರಕರ್ತ ಅರ್ನಾಬ್​ ಗೋಸ್ವಾಮಿ ಅವರನ್ನು ಬಂಧಿಸಿದ್ದಾರೆ.  ಆ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್, ಮಹಾರಾಷ್ಟ್ರದಲ್ಲಿನ ಬೆಳವಣಿಗೆ ತುರ್ತುಪರಿಸ್ಥಿತಿಯ ದಿನಗಳನ್ನು ಮತ್ತೆ ನೆನಪಿಗೆ ಬರುವಂತೆ ಮಾಡಿದೆ. ಇದು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಈಗಾಗಲೇ ಖಂಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ.  ಕಾಂಗ್ರೆಸ್​ ಹಾಗೂ ಅದರ ಮಿತ್ರಪಕ್ಷಗಳು ಪ್ರಜಾಪ್ರಭುತ್ವವನ್ನು ಮತ್ತೊಮ್ಮೆ ಅಣಕಿಸಿವೆ. ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರ ಮೇಲಿನ ದಾಳಿ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ ಹರಣ ಎಂದು ಖಂಡಿಸಿದ್ದಾರೆ. ಮಹಾರಾಷ್ಟ್ರರ ಸರ್ಕಾರ ಅಧಿಕಾರ ದುರ್ಬಳಕ ಮಾಡಿಕೊಂಡಿದೆ. ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಖಂಡನಾರ್ಹ ಎಂದು ಗುಡುಗಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top