ಕೊರೊನಾ ಸೋಂಕು ಇಳಿಕೆ; ಪರೀಕ್ಷೆ ಪ್ರಮಾಣ ಏರಿಕೆ: ಸಚಿವ ಸುಧಾಕರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ  ಸೋಂಕಿತರ ಸಂಖ್ಯೆ ಹಾಗೂ ಮರಣ ಪ್ರಮಾಣ ಇಳಿಕೆಯಾಗಿದ್ದು,  ಪರೀಕ್ಷಾ ಪ್ರಮಾಣ ಹೆಚ್ಚಳ ಮಾಡಲಾಗಿದೆ. ಇದರ ಜೊತೆ  ರಾಜ್ಯದಲ್ಲಿ ಶೇ.27.3 ರಷ್ಟು ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‍ನಿಂದ ಗುಣಮುಖರಾದವರು, ಸಕ್ರಿಯ ಸೋಂಕು ಹೊಂದಿದವರನ್ನು ಕೋವಿಡ್ ಸೋಂಕಿನ ಪ್ರಮಾಣದ ಅಂದಾಜಿಗೆ ಸಂಬಂಧಿಸಿದಂತೆ ಸಿರೋ ಸಮೀಕ್ಷೆಗೊಳಪಡಿಸಲಾಗಿತ್ತು. ಸೆಪ್ಟೆಂಬರ್ 3ರಿಂದ 16ರ ನಡುವಿನ ಅವಧಿಯಲ್ಲಿ ಮೊದಲ ಸುತ್ತಿನ ಸಮೀಕ್ಷೆ ನಡೆಯಲಿದೆ ಎಂದರು.

lab corona

ರಾಜ್ಯದ 30 ಜಿಲ್ಲೆಗಳು ಸೇರಿದಂತೆ ಬಿಬಿಎಂಪಿಯ 8 ವಲಯಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಸಮೀಕ್ಷೆ ನಡೆಸಲಾಗಿತ್ತು. ಹಿಂದೆ ಹಾಗೂ ಸರ್ವೇ ಮಾಡುವ ಸಮಯದಲ್ಲಿ ಸೋಂಕಿಗೆ ಒಳಗಾದವರ ಒಟ್ಟು ಪ್ರಮಾಣ ಶೇ.27.3ರಷ್ಟಿದ್ದು, ಅಷ್ಟೇ ಪ್ರಮಾಣದ ಜನರಲ್ಲಿ ಆಯಂಟಿಬಾಡಿ ಸೃಷ್ಟಿಯಾಗಿದೆ. ಕೋವಿಡ್ ಮರಣ ಪ್ರಮಾಣವು ಶೇ.0.05ರಷ್ಟಿದೆ. ಮುಂಬೈ, ಪುಣೆ, ದೆಹಲಿ, ಚೆನ್ನೈಗೆ ಹೋಲಿಸಿದರೆ ಕಡಿಮೆ ಆಗಿದೆ.

ಐಸಿಎಂಆರ್ ಮಾರ್ಗಸೂಚಿಯಂತೆ ರ್ಯಾಪಿಡ್ ಆಂಟಿಜನ್, ಆರ್‍ಟಿಪಿಸಿಆರ್ ಹಾಗೂ ಐಜಿಜಿ ಆಯಂಟಿಬಾಡಿ ಪರೀಕ್ಷೆ ಮಾಡಲಾಗಿದೆ. ಒಟ್ಟು 16,585 ಜನರನ್ನು ಪರೀಕ್ಷೆಗೊಳಪಡಿಸಿದ್ದು, 15,624 ಮಂದಿಯ ಫಲಿತಾಂಶ ಬಂದಿದೆ.ಗರ್ಭಿಣಿಯರು, ಆಸ್ಪತ್ರೆಯ ಹೊರರೋಗಿ ವಿಭಾಗದ ರೋಗಿಗಳು, ಸಿಬ್ಬಂದಿ ಸೇರಿದಂತೆ ಕಡಿಮೆ ರಿಸ್ಕ್ ಹೊಂದಿದವರು, ಚಾಲಕರು, ವ್ಯಾಪಾರಿಗಳು, ಆರೋಗ್ಯ ಕಾರ್ಯಕರ್ತರು, ಕಂಟೇನ್ಮೆಂಟ್ ಜೋನ್‍ನಲ್ಲಿರುವ ಜನರು, ಕಸ ಸಂಗ್ರಹಣೆ ಮಾಡುವರು ಹಾಗೂ ಹೆಚ್ಚು ರಿಸ್ಕ್ ಹೊಂದಿರುವವರನ್ನು ವರ್ಗೀಕರಣ ಮಾಡಿ ಸರ್ವೇ ಮಾಡಲಾಗಿದೆ.

ಗುಣಮುಖರಾದವರ ಸಂಖ್ಯೆ ಶೇ.94-95ರಷ್ಟಿದೆ. ಹೀಗಾಗಿ ಸೋಂಕಿನ ಸಂಖ್ಯೆ ಹೆಚ್ಚಳದ ಬಗ್ಗೆ ಭಯಭೀತರಾಗುವುದು ಬೇಡ. ಸರಿಯಾದ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಜೀವ ಉಳಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *