Connect with us

Dvgsuddi Kannada | online news portal | Kannada news online

ವಿನಯ್ ಕುಲಕರ್ಣಿ ಬಂಧನ ಖಂಡನೀಯ:  ಜಯಮೃತ್ಯುಂಜಯ ಸ್ವಾಮೀಜಿ

ಪ್ರಮುಖ ಸುದ್ದಿ

ವಿನಯ್ ಕುಲಕರ್ಣಿ ಬಂಧನ ಖಂಡನೀಯ:  ಜಯಮೃತ್ಯುಂಜಯ ಸ್ವಾಮೀಜಿ

ಡಿವಿಜಿ ಸುದ್ದಿ, ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧಿಸಿರುವುದು  ಖಂಡನೀಯ, ಇದೊಂದು ರಾಜಕೀಯ ಪ್ರೇರಿತ ಘಟನೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕಣದಲ್ಲಿ ವಿನಯ್ ಕುಲಕರ್ಣಿಗೆ ನೋಟಿಸ್ ನೀಡದೆ,  ಏಕಾಏಕಿ ಕರೆದುಕೊಂಡು  ಹೋಗಿದ್ದಾರೆ. ಈ ಮೂಲಕ ರಾಜಕೀಯವಾಗಿ ತೇಜೋವಧೆ ಮಾಡವ ಪ್ರಯತ್ನ ನಡೆದಿದೆ. ಇದೊಂದು ರಾಜಕೀಯ ಪ್ರೇರಿತವಾಗಿದ್ದು, ಕುಲಕರ್ಣಿ ಯಾವುದೇ ತಪ್ಪು ಮಾಡಿಲ್ಲ ಎಂದರು.

ವಿನಯ್ ಕುಲಕರ್ಣಿ ಮನೆತನದ  ಇತಿಹಾಸ ಬಹಳ ದೊಡ್ಡದಿದೆ. ಈ ಪ್ರಕರಣದಲ್ಲಿ  ಕುಲಕರ್ಣಿ ತಪ್ಪು ಮಾಡಿಲ್ಲ ಅಂತಾ ಜನ ಹೇಳುತ್ತಿದ್ದಾರೆ. ಹೀಗಾಗಿ ಸಿಬಿಐ ಪಾರದರ್ಶಕವಾಗಿ ತನಿಖೆ ನಡೆಸಬೇಕು. ಈ ಮೂಲಕ ಸತ್ಯಾಸತ್ಯತೆ ಹೊರ ಬರಲಿದೆ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top