Connect with us

Dvgsuddi Kannada | online news portal | Kannada news online

ಆರ್ ಆರ್ ನಗರ ಬೈ ಎಲೆಕ್ಷನ್;  ಭರ್ಜರಿ ಗೆಲುವಿನತ್ತ ಮುನಿರತ್ನ..!

ಪ್ರಮುಖ ಸುದ್ದಿ

ಆರ್ ಆರ್ ನಗರ ಬೈ ಎಲೆಕ್ಷನ್;  ಭರ್ಜರಿ ಗೆಲುವಿನತ್ತ ಮುನಿರತ್ನ..!

 ಡಿವಿಜಿ ಸುದ್ದಿ,  ಬೆಂಗಳೂರು : ನವೆಂಬರ್ 3ರಂದು ನಡೆದ ರಾಜರಾಜೇಶ್ವರಿನಗರ  ಉಪ ಚುನಾವಣೆಯ ಮತಏಣಿಕೆ ಕಾರ್ಯ ಇಂದು ನಡೆಯುತ್ತಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ  11ನೇ ಸುತ್ತಿನಲ್ಲಿಯೂ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 27 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿರುವ ಮುನಿರತ್ನ ಹ್ಯಾಟ್ರಿಕ್ ಗೆಲುವಿನತ್ತ ಹೆಜ್ಜೆ ಹಾಕಿದ್ದಾರೆ.

ಚುನಾವಣೆ ಪ್ರಚಾರ ವೇಳೆ ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಉಂಟಾಗಿತ್ತು.  ಬಿಜೆಪಿಯ ಅಭ್ಯರ್ಥಿ ಮತಏಣಿಕೆ ಆರಂಭವಾದಾಗಿನಿಂದಲೂ ಮುನ್ನಡೆಯನ್ನು ಕಾಯ್ದುಕೊಂಡು ಬಂದಿದ್ದಾರೆ. ಇದೀಗ 11ನೇ ಸುತ್ತಿನ ಮತಏಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ 55,102 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿ ಕುಸುಮಾ 28,046 ಮತಗಳನ್ನು ಪಡೆದಿದ್ದರೇ, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 1,856 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಮುನಿರತ್ನ 27,056 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top