ಭದ್ರಾ ಡ್ಯಾಂನಿಂದ 197 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಪುಟ ಒಪ್ಪಿಗೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಬಯಲುಸೀಮೆ ಪ್ರದೇಶಗಳಿಗೆ ಭದ್ರಾ ಜಲಾಶಯದಿಂದ 1281.80 ಕೋಟಿ ವೆಚ್ಚದಲ್ಲಿ197 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು, ತರೀಕೆರೆ ಹಾಗೂ ಚಿಕ್ಕಮಗಳೂರು, ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು 197 ಕೆರೆಗಳನ್ನು ತುಂಬಿಸಲು 1281.80 ಕೋಟಿ ರೂ. ಯೋಜನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ.

ಈ ಯೋಜನೆಯು ಮೂರು ಹಂತಗಳಲ್ಲಿ ಅನುಷ್ಠಾನಗೊಳ್ಳಲಿದ್ದು, ಮೊದಲನೇ ಹಂತದ ಯೋಜನೆಗೆ 406.50 ಕೋಟಿ, 2ನೇ ಹಂತದ ಯೋಜನೆಗೆ 298.60 ಕೋಟಿ ಹಾಗೂ 3ನೇ ಹಂತದ ಯೋಜನೆಯಲ್ಲಿ 476.07 ಕೋಟಿ ವೆಚ್ಚವಾಗಲಿದೆ. ತರೀಕೆರೆ ತಾಲ್ಲೂಕಿನ 31, ಕಡೂರಿನ 114, ಚಿಕ್ಕಮಗಳೂರಿನ 48, ಹಾಗೂ ಹಾಸನ ಜಿಲ್ಲೆಯ ಅರಸೀಕೆರೆಯ 4 ಸೇರಿದಂತೆ ಒಟ್ಟು 197 ಕೆರೆಗಳನ್ನು ತುಂಬಿಸಲು1281.80 ಕೋಟಿ ವೆಚ್ಚ ಮಾಡಲಾಗುತ್ತದೆ. ಇದಕ್ಕಾಗಿ ಭದ್ರಾ ಜಲಾಶಯದಿಂದ 1.45 ಟಿಎಂಸಿ ನೀರು ನೀಡಲು ಒಪ್ಪಿಗೆ ಸಿಕ್ಕಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *