Connect with us

Dvgsuddi Kannada | online news portal | Kannada news online

ಚಿತ್ರದುರ್ಗದಲ್ಲಿ ಬೀಕರ ಅಪಘಾತ: ಸ್ಥಳದಲ್ಲಿಯೇ ಇಬ್ಬರ ದುರ್ಮರಣ

ಪ್ರಮುಖ ಸುದ್ದಿ

ಚಿತ್ರದುರ್ಗದಲ್ಲಿ ಬೀಕರ ಅಪಘಾತ: ಸ್ಥಳದಲ್ಲಿಯೇ ಇಬ್ಬರ ದುರ್ಮರಣ

ಹಿರಿಯೂರು: ತಾಲ್ಲೂಕಿನ ಪಟ್ರೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣ  ಹೊಂದಿದ್ದಾರೆ. ಹಾವೇರಿಯ ಲತಾ (28) ಮತ್ತು ಬೆಂಗಳೂರಿನ ಅತ್ತಿಬೆಲೆ ನಿವಾಸಿ ಟಾಟಾ ಏಸ್ ಚಾಲಕ ಶಶಿಕುಮಾರ್ (26) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶ್ರುತಿ (03), ಜ್ಯೋತಿ (25), ಜಾಗೃತಿ (04), ದ್ಯಾಮಣ್ಣ (24) ವರ್ಷ ಎಂಬುವರು ಭೀಕರವಾಗಿ  ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಇವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆದ್ದಾರಿಯ ಗ್ರೀನ್ ಲ್ಯಾಂಡ್ ಹೋಟೆಲ್ ಸಮೀಪದಲ್ಲಿ ನಿನ್ನೆ ರಾತ್ರಿ ( ನ. 13)  ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್, ಇಂಡಿಕಾ ಕಾರು, ಮಾರುತಿ ಆಮ್ನಿ, ಕ್ಯಾಂಟರ್ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಓಮಿನಿ ಕಾರು ಹಾಗೂ ಟಾಟಾ ಏಸ್ ವಾಹನದಲ್ಲಿ ಇದ್ದವರು ಮೃತಪಟ್ಟಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top