Connect with us

Dvgsuddi Kannada | online news portal | Kannada news online

ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ವಿಚಾರ ಕೇಳಿ ಆಶ್ಚರ್ಯವಾಯ್ತು: ಸಿದ್ದಗಂಗಾ ಶ್ರೀ ಅಸಮಾಧಾನ

ಪ್ರಮುಖ ಸುದ್ದಿ

ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ವಿಚಾರ ಕೇಳಿ ಆಶ್ಚರ್ಯವಾಯ್ತು: ಸಿದ್ದಗಂಗಾ ಶ್ರೀ ಅಸಮಾಧಾನ

ತುಮಕೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ  ರಚನೆ ಮಾಡ್ತಿರೋ ವಿಚಾರ ಕೇಳಿ ನನಗೆ ಆಶ್ಚರ್ಯವಾಯ್ತು.  ಜಾತಿಗೊಂದು ನಿಗಮ, ಪ್ರಾಧಿಕಾರ ಮಾಡುತ್ತಾ ಹೋದರೆ ಅದಕ್ಕೆ ಮಿತಿನೇ ಇರಲ್ಲ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಪ್ರಕಾರ ಎಲ್ಲ ಜಾತಿಗಳಲ್ಲೂ ಹಿಂದುಳಿದವರಿದ್ದಾರೆ. ಎಲ್ಲ ಸಮಾಜದಲ್ಲಿಯೂ ಕಡುಬವರು ಇದ್ದಾರೆ. ನಿಗಮ ಸ್ಥಾಪನೆಗೆ ಬದಲು ಆರ್ಥಿಕವಾಗಿ ಹಿಂದುಳಿದವರಿಗೆ ಹೆಚ್ಚು ಒತ್ತು ಕೊಡುವ ಕೆಲಸವನ್ನು ಸರ್ಕಾರ ಮಾಡಿದರೆ ಒಳ್ಳೆಯದು ಎಂದು ತಿಳಿಸಿದರು.

ರಾಜ್ಯ ಸರ್ಕಾರ ಇರುವುದು ಸಮಗ್ರ ರಾಜ್ಯದ ಅಭಿವೃದ್ಧಿಗೋಸ್ಕರ. ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯೋಗದಲ್ಲಿ ಅವಕಾಶ ಕೊಟ್ಟರೆ ತುಂಬಾ ಸಂತೋಷ. ಒಂದು ಜಾತಿಗೆ ಪ್ರಾಧಿಕಾರ ಮಾಡಿದರೆ ಮುಂದೆ ಪ್ರತಿಯೊಬ್ಬರೂ ಕೇಳುತ್ತಾರೆ. ಇದು ಸಹಜ ಆಗುತ್ತೆ ಎಂದು ಶ್ರೀಗಳು ನುಡಿದರು.

ಪ್ರಾಧಿಕಾರ ಸ್ಥಾಪನೆಗೆ ಮಂಗಳವಾರ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಪ್ರಾಧಿಕಾರಕ್ಕೆ ಇನ್ನೂ ಹಣಕಾಸಿನ ನೆರೆವು ಘೋಷಣೆ ಮಾಡಿಲ್ಲ. ರಾಜ್ಯ ಸರ್ಕಾರದ ನಡೆಗೆ ಕೆಲವು ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top