ದೇಶದಲ್ಲಿ ಕಾಂಗ್ರೆಸ್ ಪರ್ಯಾಯ ರಾಜಕೀಯ ಪಕ್ಷವಾಗಿ ಉಳಿದಿಲ್ಲ: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿದೇಶದಲ್ಲಿ ಕಾಂಗ್ರೆಸ್ ಪರಿಣಾಮಕಾರಿ- ಪರ್ಯಾಯ ಆಡಳಿತ ನೀಡಬಲ್ಲ ಪಕ್ಷವಾಗಿ ಉಳಿದಿಲ್ಲ.  ಬಿಹಾರದ ಜನರಷ್ಟೇ ಅಲ್ಲ, ದೇಶದ ಜನರೂ ಸಹ ಪರ್ಯಾಯ ಪಕ್ಷ ಎಂದು ಒಪ್ಪಿಕೊಳ್ಳಲು ಸಿದ್ದರಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮುಕ್ತಯವಾಗಿದೆ.  ದೇಶದಲ್ಲಿ  ಕಾಂಗ್ರೆಸ್ ಪರ್ಯಾಯ ಪಕ್ಷವನ್ನಾಗಿ ಜನ ಪರಿಗಣಿಸುವ ಯೋಗ್ಯತೆಯನ್ನು ಪಕ್ಷ ಉಳಿಸಿಕೊಂಡಿಲ್ಲ ಎಂಬ ಅವರ ಹೇಳಿಕೆ ಕಾಂಗ್ರೆಸ್ ಮತ್ತು ದೇಶ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

congress party meeting dvgsuddi

ಕಾಂಗ್ರೆಸ್ ಪಕ್ಷದಲ್ಲಿ ಸಾಲು ಸಾಲು ಸೋಲಿನಿಂದ ಕಂಗೆಟ್ಟಿದೆ. ಅದರಲ್ಲೂ ಬಿಹಾರ ಚುನಾವಣೆಯಲ್ಲಿ ತೀರ ಕಳಪೆ ಸಾಧನೆ ಮಾಡಿದೆ.  ಪಕ್ಷದೊಳಗೆ ನಾಯಕತ್ವದ ವಿಚಾರದಲ್ಲಿ ಮತ್ತೊಂದು ಸುತ್ತಿನ ಅಸಮಾಧಾನ, ಭಿನ್ನಮತ ಭುಗಿಲೇಳುವ ಲಕ್ಷಣಗಳು ಗೋಚರಿಸಿವೆ. ಪರಿಣಾಮಕಾರಿ ಪರ್ಯಾಯ ಆಡಳಿತ ನೀಡಬಲ್ಲ ಪಕ್ಷ ಕಾಂಗ್ರೆಸ್ ಎಂಬುದನ್ನು ಬಿಹಾರದ ಜನರಷ್ಟೇ ಅಲ್ಲ, ದೇಶದ ಜನರೂ ಒಪ್ಪಿಕೊಳ್ಳುತ್ತಿಲ್ಲ. ಎಲ್ಲೆಲ್ಲಿ ಉಪಚುನಾವಣೆಗಳು ನಡೆದಿವೆಯೋ ಅಲ್ಲೆಲ್ಲ ಕಾಂಗ್ರೆಸ್ ಸೋಲು ಅನುಭವಿಸಿದೆ ಎಂದಿದ್ದಾರೆ.

ಬಿಹಾರದ ಫಲಿತಾಂಶ ನೋಡಿ ಅಲ್ಲಿ ಪರ್ಯಾಯವಾಗಿ ಜನರಿಗೆ ಕಾಣಿಸಿದ್ದು ಆರ್ ಜೆಡಿ ಹೊರತು ಕಾಂಗ್ರೆಸ್ ಪಕ್ಷವಲ್ಲ. ಗುಜರಾತ್ ನೋಡಿ ಅಲ್ಲಿ ಉಪಚುನಾವಣೆಯಲ್ಲಿ ಗೆಲ್ಲಲಾಗಿಲ್ಲ. ಲೋಕಸಭಾ ಉಪ ಚುನಾವಣೆಯಲ್ಲಿ ಒಂದೇ ಒಂದು ಸೀಟೂ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಲಿದೆ ಎಂಬ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ತಾರೀಕ್ ಅನ್ವರ್ ಅವರ ಸಲಹೆಯನ್ನು ಉಲ್ಲೇಖಿಸಿದ ಸಿಬಲ್, ಕಳೆದ ಆರು ವರ್ಷಗಳಲ್ಲಿ ಕಾಂಗ್ರೆಸ್ ಆತ್ಮಾವಲೋಕ ಮಾಡಿಲ್ಲ ಎಂದಾದರೆ, ಈಗ ಆತ್ಮಾವಲೋಕನ ಮಾಡುವುದರಿಂದ ಆಗಬಹುದಾದ ಪ್ರಯೋಜನದ ಬಗ್ಗೆ ಯಾವ ಭರವಸೆ ಇಟ್ಟುಕೊಳ್ಳಬಹುದು ಎಂದೂ ಸಿಬಲ್ ಪ್ರಶ್ನಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *