ದಾವಣಗೆರೆ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಸಾಧಕರಿಗೆ ಸನ್ಮಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ಕನ್ನಡ ಭಾಷೆಯ ಉಳಿವಿಗಾಗಿ, ಬೆಳವಣಿಗೆಗಾಗಿ ಹಾಗೂ ಭಾಷೆಯನ್ನು ಮತ್ತಷ್ಟು ಸಶಕ್ತಗೊಳಿಸಲು ಮುಂದಿನ ಒಂದು ವರ್ಷದ ಅವಧಿಯನ್ನು ‘ಕನ್ನಡ ಕಾಯಕ ವರ್ಷವಾಗಿ’ಆಚರಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಿ  ಮಾತನಾಡಿದ ಅವರು,  ಕನ್ನಡ ನಾಡು, ನುಡಿ, ಭಾಷೆ, ಏಳಿಗೆಗಾಗಿ ದುಡಿದ ಸಾಧಕರನ್ನು ಗೌರವಿಸುತ್ತಿರುವುದು ಔಚಿತ್ಯಪೂರ್ಣವಾಗಿದೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ನಿಯಮಾನುಸಾರ ಸರಳವಾಗಿ ಕನ್ನಡ ರಾಜ್ಯೋತ್ಸವನ್ನು ಜಿಲ್ಲೆಯಲ್ಲಿ ಆಚರಿಸಲಾಯಿತು. ಆದರೆ ಮುಂದಿನ ಬಾರಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣ ಎಂದು ಆಶಿಸಿದರು.

ಸುಮಾರು 2,500 ವರ್ಷಗಳ ಹಿಂದೆ ಜನಿಸಿದ ಕನ್ನಡವೆಂಬ ಶಿಶು ಇಂದು ಪ್ರಬುದ್ದಳಾಗಿ ಬೆಳೆದಿದ್ದಾಳೆ. ಅನ್ಯ ಭಾಷೆಗಳ ಒಳಹರಿವಿನ ಪರಿಣಾಮ ಅನೇಕ ಸವಾಲುಗಳು ಮುಖಾಮುಖಿಯಾಗಿದ್ದು ಅದನ್ನು ದಿಟ್ಟವಾಗಿ ನಾವೆಲ್ಲ ಎದುರಿಸಬೇಕಾಗಿದೆ. ಜೊತೆಗೆ ಬೆಳೆಯುತ್ತಿರುವ ಮಾಹಿತಿ ತಂತ್ರಜ್ಞಾನಕ್ಕೆ ತಕ್ಕಂತೆ ಕನ್ನಡ ಭಾಷೆಯನ್ನು ಸಜ್ಜುಗೊಳಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

127242672 381779169797584 7224518573595605446 o

ಕನ್ನಡವನ್ನು ಉಳಿಸಿ, ಬೆಳೆಸಿ, ರಕ್ಷಿಸಿ ಎಂಬ ಘೋಷಣೆಗಳು ಅನಿವಾರ್ಯವಾಗಿರುವ ಈ ಸಂದರ್ಭದಲ್ಲಿ ಕನ್ನಡ ಸೇನಾನಿಯ ಪ್ರೇರಣೆಯೇ ಭಾಷೆಯ ಉಳಿವಿಗೆ ಹೋರಾಟದ ದೀವಿಗೆಯಾಗಲಿ. ಕನ್ನಡ ನಾನು ಕಂಡ ಅಪ್ರತಿಮ, ಕನ್ನಡ ಸೇನಾನಿಗಳನ್ನು ಈ ಸಂದರ್ಭದಲ್ಲಿ ನೆನೆಸಿಕೊಳ್ಳುವ ಅಗತ್ಯತೆ ಇದ್ದು ಅವರ ಹೋರಾಟದ ಫಲವಾಗಿಯೇ ಇಂದು ಅಖಂಡ ಕರ್ನಾಟಕವಾಗಿ ಉಳಿದಿರುವುದು ಎಂದ ಅವರು ಎಲ್ಲ ಸನ್ಮಾನಿತರನ್ನು ಅಭಿನಂದಿಸಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕಳೆದ ಸಾಲಿನಲ್ಲಿ ನೆರೆ ಹಾವಳಿಯ ಕಾರಣದಿಂದ ಹಲವು ಕಾರ್ಯಕ್ರಮಗಳ ಮತ್ತು ವಿವಿಧ ಜಯಂತಿಗಳ ಅನುದಾನವನ್ನು ನೆರೆ ಸಂತ್ರಸ್ತರ ನಿಧಿಗೆ ನೀಡಲಾಗಿತ್ತು. ಈ ಬಾರಿಯೂ ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕ್ರಮಗಳನ್ನು ರಾಷ್ಟ್ರೀಯ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಗಿದೆ. ಇದೀಗ ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ಮತ್ತು ಹಿರಿಯರು ರಾಜ್ಯೋತ್ಸವ ಪ್ರಯುಕ್ತ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕಳೆದ ಸಾಲು ಮತ್ತು ಪ್ರಸಕ್ತ ಸಾಲಿನ ಸಾಧಕರನ್ನು ಗುರುತಿಸಿ ಸಾಧಕರನ್ನು ನವೆಂಬರ್ ಮಾಹೆಯಲ್ಲಿ ಸನ್ಮಾನಿಸುವಂತೆ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿ ರಚಿಸಿ, ಸಾಧಕರನ್ನು ಆಯ್ಕೆ ಮಾಡಿ ಇಂದು ಅವರನ್ನು ಸನ್ಮಾನಿಸುವ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಇಂದಿನ ಸನ್ಮಾನಿತರು ಜಿಲ್ಲೆಯ ಹೆಸರನ್ನು ಎತ್ತರಕ್ಕೆ ತೆಗೆದುಕೊಂಡು ಹೋದವರಾಗಿದ್ದು, ನಿಮ್ಮ ಸಾಧನೆ ದೊಡ್ಡದು. ಈ ಸನ್ಮಾನ ಒಂದು ಸಾಂಕೇತಿಕ ಮಾತ್ರ, ಆದರೆ ಸಾಧಕರು ತೃಪ್ತರಾಗುವುದಿಲ್ಲ. ಇನ್ನೂ ಹೆಚ್ಚಿನ ಸಾಧನೆ ಮಾಡಿ, ಕೊಡುಗೆ ನೀಡಬೇಕೆಂಬ ಹಂಬಲ ಅವರಲ್ಲಿ ಇದ್ದೇ ಇರುತ್ತದೆ ಹಾಗೂ ಈ ಸನ್ಮಾನ ಕೂಡ ಅದನ್ನೇ ಸೂಚ್ಯವಾಗಿ ಹೇಳುತ್ತದೆ. ಸನ್ಮಾನಿತರು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತಾ, ಜಿಲ್ಲಾಡಳಿತದ ಪರವಾಗಿ ಎಲ್ಲ ಸನ್ಮಾತರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

  • ಸಾಧಕರ ವಿವರ:
  • ಸಂಗೀತ ಕ್ಷೇತ್ರ: ಶ್ಯಾಮಲಾಬಾಯಿ, ಬಿ.ಪಿ ಯಮನೂರ್ ಸಾಹೇಬ್, ಜಿ.ಎಂ ಚನ್ನರಾಜು ಸಂಗೀತ.
  • ಜಾನಪದ ಕ್ಷೇತ್ರ: ಮಂಜಪ್ಪ ಬಲ್ಲೂರು, ಜಿ.ಎಂ ರಾಜಪ್ಪ ಪಾಂಡೋಮಟ್ಟಿ, ರುದ್ರಾಕ್ಷಿ ಬಾಯಿ ಸಿ.ಕೆ
  • ಸಮಾಜ ಸೇವೆ : ಎಂ.ಸಿ ಚಂದ್ರಪ್ಪ, ವಾಸುದೇವ್ ರಾಯ್ಕರ್, ಸಂತೋಷಕುಮಾರ್.ಎಂ, ರಮಣ ಲಾಲ್ ಪಿ ಸಂಘವಿ.
  • ಸಾಹಿತ್ಯ ಕ್ಷೇತ್ರ: ಜಿ.ಹೆಚ್ ರಾಜಶೇಖರ್ ಗುಂಡಗಟ್ಟಿ, ಕೆ ಜಿ ಸರೋಜಾ ಎಚ್.ಕೆ ಸತ್ಯಭಾಮ
  • ಸಂಘ ಸಂಸ್ಥೆಗಳು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ, ಪ್ರೇರಣಾ ಮಹಿಳಾ ಉದ್ಯಮಿಗಳ ಸಂಘ ದಾವಣಗೆರೆ, ಅಕ್ಕಮಹಾದೇವಿ ಮಹಿಳಾ ಸೇವಾ ಸಂಸ್ಥೆ ದಾವಣಗೆರೆ.
  • ಕೃಷಿ ಕ್ಷೇತ್ರ: ಆಂಜನೇಯ ಅಂದನೂರು, ರಾಘವ ಮಲ್ಲನಾಯ್ಕನಹಳ್ಳಿ
  • ಕ್ರೀಡಾ ಕ್ಷೇತ್ರ: ಮಂಜು ಮೋಘವೀರ್, ಕೃಷ್ಣ.ಎಸ್, ಮಂಜಪ್ಪ,
  • ರಂಗಭೂಮಿ ಕ್ಷೇತ: ಬಿ.ಉಮಾಶ್ರಿ, ಕೆ.ವೀರಸ್ವಾಮಿ, ತಿಪ್ಪೇಶ್‍ರಾವ್ ಚವ್ಹಣ್, ಚಂದ್ರಪ್ಪ.
  • ಇತರೆ: ಮುರುಗೇಂದ್ರಪ್ಪ ಶಿಕ್ಷಣ ಕ್ಷೇತ್ರದಲ್ಲಿ, ಅಮ್ಜದ್ ಅಲಿ ಇವರು ಕನ್ನಡಪರ ಹೋರಾಟ ಮಂಡಲಿಯಲ್ಲಿ, ಪತ್ರಕರ್ತರಾದ ಮಂಜುನಾಥ ಕಾಡಜ್ಜಿ ,  ಹೆಚ್ ಎಂ ಪಿ ಕುಮಾರ್  ವಿಜಯ್ ಛಾಯಾಗ್ರಾಹಕ  ಜಾಧವ್ , ಸಂಕೀರ್ಣ ಉಜ್ಜನಪ್ಪ, ಹಾಗೂ ಸಂತೋಷ್‍ಕುಮಾರ್ ಕುಲಕರ್ಣಿ ಚಿತ್ರಕಲೆಯಲ್ಲಿ ಮತ್ತು ಮಾಧವಿ ಡಿ.ಕೆ ನೃತ್ಯ ಕಲೆಯಲ್ಲಿ ಸಾಧಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರು ಹಾಗೂ ಕೆಎಸ್‍ಡಿಸಿ ಅಧ್ಯಕ್ಷರು ಮತ್ತು ನಿರ್ದೇಶಕರಾದ ಮಾಡಾಳು ವಿರೂಪಾಕ್ಷಪ್ಪ, ಜಿ.ಪಂ.ಅಧ್ಯಕ್ಷೆ ದೀಪಾ ಜಗದೀಶ್, ದೂಢಾ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ, ಎಎಸ್‍ಪಿ ರಾಜೀವ್, ಎಸಿ ಮಮತಾ ಹೊಸಗೌಡರ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ದೂಢಾ ಆಯುಕ್ತ ಕುಮಾರಸ್ವಾಮಿ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸನ್ಮಾನಿತರ ಅಭಿಮಾನಿಗಳು ಇದ್ದರು. ಸುಮಾ ಜಯಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *