Connect with us

Dvgsuddi Kannada | online news portal | Kannada news online

ವಿಜಯನಗರ ಜಿಲ್ಲೆ ವಿರೋಧಿಸಿ ಕರೆ ನೀಡಿದ್ದ ಬಳ್ಳಾರಿ ಬಂದ್ ನೀರಸ ಪ್ರತಿಕ್ರಿಯೆ

ಜಿಲ್ಲಾ ಸುದ್ದಿ

ವಿಜಯನಗರ ಜಿಲ್ಲೆ ವಿರೋಧಿಸಿ ಕರೆ ನೀಡಿದ್ದ ಬಳ್ಳಾರಿ ಬಂದ್ ನೀರಸ ಪ್ರತಿಕ್ರಿಯೆ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆ ಬಿಭಜಿಸಿ ವಿಜಯನಗರ ಜಿಲ್ಲೆ ಘೋಷಣೆ ವಿರೋಧಿಸಿ ಅಖಂಡ ಬಳ್ಳಾರಿ ಜಿಲ್ಲೆಯ ಉಳಿವಿಗಾಗಿ ಒತ್ತಾಯಿಸಿ ಇಂದು  ಕರೆ ನೀಡಿದ್ದ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಳ್ಳಾರಿಯ ಸುಮಾರು 62 ಕ್ಕೂ ಹೆಚ್ಚು ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿದ್ದವು. ಆದರೆ ಸಂಘಟನೆಯ ಕೊರತೆಯಿಂದಾಗಿ ಬಳ್ಳಾರಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿಲ್ಲ. ಬಳ್ಳಾರಿ ನಗರದ ರಾಯಲ್ ಸರ್ಕಲ್ ಹೊರತುಪಡಿಸಿ ಉಳಿದಂತೆ ಜನ ಜೀವನ ಎಂದಿನಂತೆ ಇತ್ತು. ಯಾವುದೇ ರಸ್ತೆಗಳು ಬಂದ್ ಆಗಿರಲಿಲ್ಲ.

ಬಂದ್ ಕೇವಲ ಸಾಂಕೇತಿಕ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದೆ. ಆಯಾ ಸಂಘಟನೆಯ ನಾಯಕರಿಗೆ ಮಾತ್ರ ಬಂದ್ ಸೀಮಿತವಾಗಿದೆ. ಈ ಹಿಂದೆ ಜಿಲ್ಲೆ ವಿಭಜನೆಗ ವಿರೋಧ ಮಾಡಿದ್ದರು. ಆದರೆ ಈಗ ಕರೆ ನೀಡಿದ ಬಂದ್‌ಗೆ ಜಿಲ್ಲೆಯ ರಾಜಕೀಯ ‌ಮುಖಂಡರು ದೂರು ಉಳಿದಿದ್ದಾರೆ.ಸಂಘಟನೆಯ ಕೊರತೆಯಿಂದಾಗಿ ಇಂದಿನ ಬಂದ್ ಸಂಪೂರ್ಣವಾಗಿ ವಿಫಲವಾಗಿದೆ.

ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಸಿಎಂ ಬಿ.ಎಸ್ ಯಡಿಯೂರಪ್ಪ ಭಾವಚಿತ್ರ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top