ಶ್ರೀಘ್ರವೇ ಸಪ್ತಪದಿ ಕಾರ್ಯಕ್ರಮ ಆರಂಭ; ಕೋಟ ಶ್ರೀನಿವಾಸ ಪೂಜಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹನೂರು: ಕೊರೊನಾದಿಂದ ಸ್ಥಗಿತಗೊಂಡಿದ್ದ ಸಪ್ತಪದಿ ಕಾರ್ಯಕ್ರಮವನ್ನು ಶೀಘ್ರ ಪ್ರಾರಂಭಿಸಿ ಬಡವರ್ಗದ ಜನರಿಗೆ ದೇವಾಲಯದ ಮೂಲಕ ಮದುವೆ ಏರ್ಪಡಿಸಲಾಗುವುದು. ಹಾಗೆಯೇ 34 ಸಾವಿರ ದೇವಾಲಯಗಳ ಅರ್ಚಕರಿಗೆ ಆರೋಗ್ಯ ವಿಮೆ ಮತ್ತು ಜೀವವಿಮೆ ಒದಗಿಸುವ ಯೋಜನೆಯೂ ಶೀಘ್ರ ಕಾರ್ಯಾರಂಭಗೊಳ್ಳಲಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಭಾಗವಹಿಸಿ ಮಾತನಾಡಿದ ಅವರು,  ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವು ಧಾರ್ಮಿಕ ಪುಣ್ಯಕ್ಷೇತ್ರವಾಗಿದ್ದು ಈ ಕ್ಷೇತ್ರವನ್ನು ಪ್ರಾಧಿಕಾರ ರಚನೆ ಮಾಡುವ ಮೂಲಕ ಅಭಿವೃದ್ಧಿಪಡಿಸಬೇಕು ಎಂಬುವ ಚಿಂತನೆ ಇದೆ ಎಂದರು.

ಕಳೆದ ಬಜೆಟ್‍ನಲ್ಲಿ ನಾಡಿನ 39 ಮಠಗಳಿಗೆ ಘೋಷಣೆ ಮಾಡಿದ್ದ  ಅನುದಾನ ಸಿಎಂ ಯಡಿಯೂರಪ್ಪ ನೀಡಿದ್ದಾರೆ.  ಶ್ರೀ ಕ್ಷೇತ್ರಗಳ ಅಭಿವೃದ್ಧಿಗೂ ಹೆಚ್ಚನ ಒತ್ತು ನೀಡಿದ್ದು ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಹೊಂದಿ ಮುಂದಿನ 4-5 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಅತ್ಯಂತ ಶ್ರೇಷ್ಠ ಧಾರ್ಮಿಕ ಪುಣ್ಯಕ್ಷೇತ್ರವಾಗಲಿದೆ ಎಂದು ತಿಳಿಸಿದರು.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *