ಬೆಂಗಳೂರು: ವೀರಶೈವ -ಲಿಂಗಾಯತ ಸಮುದಾಯವನ್ನ ಓಬಿಸಿಗೆ ಸೇರಿಸುವ ವಿಚಾರವಾಗಿ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಸಚಿವ ಸಂಪುಟ ಸಭೆಗೂ ಮುನ್ನ ಮಾತನಾಡಿದ ಅವರು, ಲಿಂಗಾಯತರನ್ನ ಓಬಿಸಿಗೆ ಸೇರಿಸುವ ಸಂಬಂಧ ಯಾವುದೇ ತೀರ್ಮಾನ ಇಲ್ಲ. ಮೊದಲು ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ ಎಂದರು.
ಯಾವುದೇ ಆತುರದ ನಿರ್ಧಾರ ಬೇಡವೆಂದು ಸಂಪುಟ ಸಹೋದ್ಯೋಗಿಗಳು ಹೇಳಿದ್ದಾರೆ. ಈ ವಿಚಾರವಾಗಿ ಮೊದಲು ದೆಹಲಿಗೆ ಹೋಗಿ ಕೇಂದ್ರದ ನಾಯಕರ ಜೊತೆ ಚರ್ಚಿಸುತ್ತೇವೆ. ಆ ಬಳಿಕವಷ್ಟೇ ಮುಂದಿನ ತೀರ್ಮಾನ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಸಂಪುಟ ವಿಸ್ತರಣೆ, ಪುನಾಚರನೆ ಕುರಿತಾಗಿ ಪ್ರತಿಕ್ರಿಯಿಸಿದ ಬಿಎಸ್ವೈ, ಈಗಷ್ಟೇ ಅಮಿತ್ ಶಾ ಜೊತೆ ಮಾತನ್ನಾಡಿದ್ದೇನೆ. ದೂರವಾಣಿ ಮೂಲಕ ಚರ್ಚಿಸಿದೆ. ಇನ್ನೆರಡು ದಿನಗಳಲ್ಲಿ ಪಟ್ಟಿ ಬರಲಿದೆ ಎಂದು ತಿಳಿಸಿದರು.



