ಹರಪನಹಳ್ಳಿ: ಚಿರತೆ ದಾಳಿಗೆ 25 ಕುರಿ, ಮೇಕೆ ಬಲಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಪನಹಳ್ಳಿ: ತಾಲೂಕಿನ ದಡಗಾರನಹಳ್ಳಿ ಗ್ರಾಮದ ಜಮೀನಿನಲ್ಲಿ ಬೀಡು ಬಿಟ್ಟಿದ್ದ ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ್ದು,  25 ಮೇಕೆ ಮತ್ತು ಕುರಿಗಳನ್ನು ತಿಂದು ಹಾಕಿದೆ.

ಹೊಳಲು ಗೋಣೆಪ್ಪ, ರಾಜಪ್ಪ ಎಂಬುವರಿಗೆ ಸೇರಿದ ಕುರಿಗಳ ಮೇಲೆ  ಚಿರತೆ ದಾಳಿ ಮಾಡಿದೆ. ಈ ದಾಳೆಯಲ್ಲಿ  18 ಕುರಿ ಮರಿಗಳು ಮತ್ತು 7 ಮೇಕೆಗಳನ್ನು ತಿಂದು ಹಾಕಿದೆ.  ಬೆಳಿಗ್ಗೆ ರಾಜಪ್ಪ ಕುರಿ ಹಟ್ಟಿಯ ಬಳಿ ಹೋದಾಗ ಸತ್ತು ಬಿದ್ದ  ಕುರಿಗಳನ್ನು ಕಂಡು ಕಣ್ಣೀರು ಹಾಕಿದ್ದಾನೆ. ಜೀವನಕ್ಕೆ ಆಧಾರವಾಗಿದ್ದ ಕುರಿಗಳ ಸಾವಿನಿಂದ  ಜೀವನ ನಡೆಸುವುದು ಕಷ್ಟವಾಗಿದೆ. ನಮಗೆ ಪರಿಹಾರ ನೀಡಬೇಕೆಂದು  ಅಧಿಕಾರಿಗಳಿಗೆ ಮನವಿ ಮಾಡಿದ್ದಾನೆ. ಘಟನೆಯ ಸ್ಥಳಕ್ಕೆ ಅರಣ್ಯ ಇಲಾಖಾ ಸಿಬ್ಬಂದಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಪಶುವೈದ್ಯಾಧಿಕಾರಿ ಡಾ.ಶ್ರೀದೇವಿ ಕುರಿ ಮತ್ತು ಮೇಕೆಗಳ ಮರಣೋತ್ತರ ಪರೀಕ್ಷೆ ನಡೆಸಿದರು. ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ದಡಗಾರನಹಳ್ಳಿ, ಕಾಯಕದಹಳ್ಳಿ, ಶೃಂಗಾರತೋಟ, ಬಾಗಳಿ ಕೂಲಹಳ್ಳಿ ಕೋಡಿಹಳ್ಳಿ, ಕಣವಿಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮದ ರೈತರು ಹೊಲಗಳಿಗೆ ತೆರಳಲು ಭಯ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *