ಡಿವಿಜಿಸುದ್ದಿ.ಕಾಂ, ದಾವಣಗೆರೆ: ಬೆಂಗಳೂರಿನ ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ತನ್ನ 24 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನೀಡುವ ಆದರ್ಶ ರತ್ನ ಪ್ರಶಸ್ತಿಗೆ ದಾವಣಗೆರೆ ಜಿಲ್ಲಾ ಕರ್ನಾಟಕ ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಸಾಲಿಗ್ರಾಮ ಗಣೇಶ್ ಶೆಣೈ ಭಾಜನರಾಗಿದ್ದಾರೆ.

ಅ.19 ರಂದು ಆದರ್ಶ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ 24 ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜಯನಗರದ ಹೆಚ್.ಎನ್.ಕಲಾಕ್ಷೇತ್ರದಲ್ಲಿ ಕನ್ನಡೋತ್ಸವ ಮತ್ತು ‘ಆದರ್ಶ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ. ಕೊಳದ ಮಠ ಮಹಾಸಂಸ್ಥಾನ ಪೀಠಾಧ್ಯಕ್ಷ ಶ್ರೀ ಶಾಂತವೀರ ಮಹಾಸ್ವಾಮಿಗಳು ನಿರ್ವಹಿಸಲಿದ್ದು, ಉದ್ಘಾಟನೆಯನ್ನು ನಾಡಿನ ಖ್ಯಾತ ಹಿರಿಯ ಕವಿ ಡಾ.ಎಚ್.ಎಸ್.ವೆಂಕಟೇಶ್ಮೂರ್ತಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಡಾ. ಕಿಕ್ಕೇರಿ ಕೃಷ್ಣಮೂರ್ತಿ ವಹಿಸಿಕೊಳ್ಳಲಿದ್ದಾರೆ. ನಾಡಿನ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಆದರ್ಶ ರತ್ನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ
ದಾವಣಗೆರೆಯಲ್ಲಿ ಕಳೆದ 4 ದಶಕಗಳಿಂದ ಕರ್ನಾಟಕ ಸುಗಮ ಸಂಗೀತ ಪರಿಷತ್ ಸೇರಿದಂತೆ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಕನ್ನಡ ನಾಡು-ನುಡಿ ಸೇವೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಸಾಲಿಗ್ರಾಮ ಗಣೇಶ್ ಶೆಣೈ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿಯ ಸಂಚಾಲಕ ನಾಗರಾಜ್ ಹೊಳ್ಳ ತಿಳಿಸಿದ್ದಾರೆ.
ಕನ್ನಡಪರ ಚಿಂತಕ ಡಾ.ಸಿ.ಸೋಮಶೇಖರ್, ಖ್ಯಾತ ರಂಗಕರ್ಮಿ ಬಿ.ವಿ.ರಾಜಾರಾಂ, ಖ್ಯಾತಗಾಯಕಿ ಅರ್ಚನಾ ಉಡುಪ, ಖ್ಯಾತ ಚಲನಚಿತ್ರ ನಟ, ನಿರ್ದೇಶಕ ಕನ್ನಡಪರ ಚಿಂತಕ ಸುಚೇಂದ್ರಪ್ರಸಾದ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.



