ಸಿ.ಪಿ. ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನೀಡುತ್ತೇವೆ ಎಂದಿರುವುದು ಆಘಾತ ತಂದಿದೆ: ರೇಣುಕಾಚಾರ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್‍ಗೆ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿರುವುದು ನನಗೆ ಆಘಾತ ತಂದಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಯಾವ ಕಾರಣಕ್ಕಾಗಿ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ ನನಗೆ ಗೊತ್ತಿಲ್ಲ ಎಂದು  ಅಸಮಾಧಾನ ಹೊರ ಹಾಕಿದರು. ಯಾವುದೇ ಕಾರಣಕ್ಕೂ ಇನ್ನು ಮುಂದೆ ಯೋಗೇಶ್ವರ್ ವಿಚಾರವನ್ನು ನನ್ನ ಬಳಿ ಕೇಳಬೇಡಿ. ಅವರೇನು ಅಮಿತ್‍ಶಾ ನಾ ? ಜೆ.ಪಿ.ನಡ್ಡಾನಾ ? ನರೇಂದ್ರ ಮೋದಿನಾ? ಇಲ್ಲವೇ ಮುಖ್ಯಮಂತ್ರಿ ಯಡಿಯೂರಪ್ಪನವರೇ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾವೇನು ಯಾವುದೇ ರೆಸಾರ್ಟ್‍ಗೆ ಹೋಗಿಲ್ಲ. ಮನೆಯಲ್ಲಿ ಕಾಫಿ, ತಿಂಡಿ ಸೇವಿಸಿ ಶಾಸಕರ ಜತೆ ಚರ್ಚೆ ಮಾಡಿದ್ದರಲ್ಲಿ ತಪ್ಪೇನಿಲ್ಲ. ನಮ್ಮ ಅಭಿಪ್ರಾಯಗಳನ್ನು ಅಧ್ಯಕ್ಷರ ಮುಂದೆ ವ್ಯಕ್ತಪಡಿಸಿದ್ದೇವೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಜತೆ ಹಲವು ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ಅವರಿಗೆ ಯಾವ ವಿಚಾರವಾಗಿ ಮಾತನಾಡಬೇಕಿತ್ತೋ ಅದನ್ನು ಮಾತನಾಡಿದ್ದೇನೆ ಎಂದರು.

ಗ್ರಾಮ ಪಂಚಾಯ್ತಿ ಚುನಾವಣೆ ಸಂಬಂಧ ಅಧ್ಯಕ್ಷರ ಬಳಿ ಚರ್ಚೆ ಮಾಡಲಾಗಿದೆ. ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ರಾಜ್ಯಾಧ್ಯಕ್ಷರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಗ್ರಾಮ ಚುನಾವಣೆಯಲ್ಲಿ ಇದನ್ನು ಅಳವಡಿಸಿಕೊಂಡು ನಮ್ಮ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವಿಗಾಗಿ ಕಾರ್ಯತಂತ್ರ ರೂಪಿಸುತ್ತೇವೆಂದು ಹೇಳಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *