ದಾವಣಗೆರೆ: ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಗೋ ಹತ್ಯೆ ನಿಷೇಧದ ಬಗ್ಗೆ ಕಾನೂನುಗಳು ಆಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಹಾಗೂ ಲವ್ ಜಿಹಾದ್ ಕಾನೂನು ಜಾರಿ ಮಾಡಿಯೇ ಸಿದ್ಧ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವಿವಿಧ ರಾಜ್ಯಗಳ ಕಾನೂನು ಅಧ್ಯಯನ ಮಾಡಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಮಾಡಲಾಗುವುದು. ಲವ್ ಜಿಹಾದ್ ಹೆಸರಿನಲ್ಲಿ ಬಡ ಹೆಣ್ಣುಮಕ್ಕಳಿಗೆ ಮೋಸ ಮಾಡಿ ಹಾಳು ಮಾಡುವುದನ್ನು ಸಹಿಸುವುದಿಲ್ಲ. ಲವ್ ಜಿಹಾದ್ ಬಗ್ಗೆ ನಿಮಗೆ ಎಷ್ಟು ಬೇಕು ಅಷ್ಟು ಸಾಕ್ಷಿ ಕೊಡುತ್ತೇವೆ ಎಂದರು.
ಎರಡು ಕಾಯ್ದೆಗೆ ವಿರೋಧ ವ್ಯಕ್ತಪಡಿಸುವ ಸಿದ್ದರಾಮಯ್ಯ ಬಗ್ಗೆ ಮಾತನಾಡಿ, ಸಿದ್ದರಾಮಯ್ಯ ಮನೆ ಹೆಣ್ಣು ಮಕ್ಕಳನ್ನು ಯಾರಾದ್ರು ತಗೊಂಡು ಹೋಗಿದ್ದರೆ ಅವರಿಗೆ ಅದರ ನೋವು ಗೊತ್ತಾಗುತ್ತಿತ್ತು. ಗೋ ನಮ್ಮ ತಾಯಿ ಇದ್ದ ಹಾಗೇ ತಾಯಿ ರಕ್ಷಣೆ ನಮ್ಮ ಹೊಣೆ ಎಂದರು. ಇನ್ನು ಕ್ರಾಸ್ ಬ್ರೀಡ್ ಬಗ್ಗೆ ಸಿದ್ದರಾಮಯ್ಯಗೆ ಟಾಂಗ್ ನೀಡದ ಅವರು, ಇಂದಿರಾಗಾಂಧಿ, ಪಿರೋಜ್ ಗಾಂಧಿ, ಸೋನಿಯಾಗಾಂಧಿ, ರಾಜೀವ್ ಗಾಂಧಿ, ಪ್ರಿಯಾಂಕ ವಾದ್ರಾ ಸಂಬಂದ ಯಾವ ಬ್ರೀಡ್ ಎಂದು ಪ್ರಶ್ನಿಸಿದರು.



