ಹಸಿರೆಲೆ ಗೊಬ್ಬರ ಬಳಕೆ ಬಗ್ಗೆ ಗಮನಹರಿಸಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಹಸಿರೆಲೆ ಗೊಬ್ಬರದ ಬಳಕೆಯಿಂದ ಭೂಮಿ ಫಲವತ್ತೆ ಹೆಚ್ಚಾಗುತ್ತಿದ್ದು, ರೈತರು ಹಸಿರೆಲೆ ಗೊಬ್ಬರ ಬಳಕೆ ಬಗ್ಗೆ ಗಮನಹರಿಸಬೇಕು ಎಂದು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ರಾಜ್ಯ ನೋಡಲ್ ಅಧಿಕಾರಿ ಡಾ.ಜಿ ಆರ್ ಪೆನ್ನೋಬಳ ಸ್ವಾಮಿ ಕರೆ ನೀಡಿದರು.

ನಗರದ ಶಾಮನೂರು ರಸ್ತೆಯಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯ ಡಿಪ್ಲೋಮೋ ಪದವಿ ಪ್ರಮಾಣಪತ್ರಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಹಸಿರೆಲೆಗೊಬ್ಬರದ ಬಳಕೆಯಿಂದ ರೈತರಿಗೆ 1 ಎಕರೆಗೆ 30 ಟನ್‌ನಷ್ಟು ಸಾವಯವ ದೊರೆಯುತ್ತದೆ ಆದ್ದರಿಂದ ರೈತರು ಈ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ದಾವಣಗೆರೆ ಜಿಲ್ಲೆಯಲ್ಲಿ 16  ತಂಡಕ್ಕೆ ತರಬೇತಿ ನೀಡಲಾಗಿದೆ. ಪ್ರತಿ ತಂಡದಲ್ಲೂ 40  ಮಂದಿಯಂತೆ 640  ರೈತರು ತರಬೇತಿ ಪಡೆದಿದ್ದಾರೆ. ಇಲ್ಲಿ ಕಲಿತಿರುವುದನ್ನು ಇತರೆ ರೈತರಿಗೆ ತಿಳಿಸಬೇಕು. ಅತ್ಯುತ್ತಮ ಸೇವೆ ನೀಡುವ ಮೂಲಕ ಯಶಸ್ಸು ಕಂಡುಕೊಳ್ಳಬೇಕೆಂದರು. ದೇಶದಲ್ಲೇ ಅತಿ ಹೆಚ್ಚು ತರಬೇತಿ ನಡೆದಿರುವುದು ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಎಂದರು.

ಬೆಂಗಳೂರಿನ ಕೃಷಿ ತಂತ್ರಜ್ಞರ ಸಂಸ್ಥೆಯ ಡಾ.ಜಿ.ಈಶ್ವರಪ್ಪ, ಪ್ರೊ. ವಿ. ವೀರಭದ್ರಯ್ಯ,ಕೃಷಿ ಅಧಿಕಾರಿ ಶ್ರೀಧರ್ ಮೂರ್ತಿ, ಸಿರಿಯಣ್ಣ, ರಾಮಪ್ಪ, ಬಿ.ಉಮೇಶ್, ಹುಲ್ಲತ್ತಿ,ಅಜಗಣ್ಣ, ನಾಗರಾಜ್ ಲೋಕಿಕೆರೆ, ರಾಜಶೇಖರ್,ಚಂದ್ರು,ರುದ್ರಪ್ಪ ಮತ್ತಿತರರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *