ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಜಯದೇವ ಸರ್ಕಲ್ಗೆ ಮಾತ್ರ ಬಂದ್ ಸೀಮಿತವಾಯಿತು. ನಗರದಲ್ಲಿ ವಾಹನ ಸಂಚಾರ, ವಾಣಿಜ್ಯ ಚಟುವಟಿಕೆ ಎಂದಿನಂತ ನಡೆದಿದೆ. ಇನ್ನು ಬಸ್, ಆಟೋ ಸಂಚಾರ ಕೂಡ ಎಂದಿನಂತೆ ಓಡಾಟ ನಡೆಸುತ್ತಿವೆ.
ಜಯದೇವ ಸರ್ಕಲ್ ನಲ್ಲಿ ಜಮಾಯಿಸಿದ ಕೆಲವು ಕನ್ನಡ ಸಂಘಟನೆ ಮುಖಂಡರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಿದರು. ಕರವೇ ಕಾರ್ಯಕರ್ತರು ಉರುಳು ಸೇವೆ ಮಾಡಿದರು. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಮಾನವ ಸರಪಳಿ ನಿರ್ಮಿಸಿ ಸ್ವಲ್ಪ ಹೊತ್ತು ರಸ್ತೆ ತಡೆ ಮಾಡಿದರು. ಮಹಿಳಾ ಕಾರ್ಯಕರ್ತೆಯರು ಯತ್ನಾಳ್ ಭಾವಚಿತ್ರಕ್ಕೆ ಸಗಣಿ ಎರಚಿ ಚಪ್ಪಲಿ ಸೇವೆ ಮಾಡಿದರು.



