Connect with us

Dvgsuddi Kannada | online news portal | Kannada news online

ಸಿಎಂ ಯಡಿಯೂರಪ್ಪ ಪರ ಭಾಷೆಯ ಏಜೆಂಟ್: ವಾಟಾಳ್ ನಾಗರಾಜ್

ಪ್ರಮುಖ ಸುದ್ದಿ

ಸಿಎಂ ಯಡಿಯೂರಪ್ಪ ಪರ ಭಾಷೆಯ ಏಜೆಂಟ್: ವಾಟಾಳ್ ನಾಗರಾಜ್

ಬೆಂಗಳೂರು:  ಕನ್ನಡಿಗರನ್ನು ಬಿಟ್ಟು, ತೆಲುಗು, ಮರಾಠಿಗರಿಗೆ ಪಟ್ಟಕಟ್ಟುತ್ತಿರುವ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಭಾಷೆಯ ಏಜೆಂಟ್ ಎಂದು ಕನ್ನಡ ಪರ ಹೋರಾಟಗಾರ  ವಾಟಾಳ್ ನಾಗರಾಜ್ ಹೇಳಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕರೆ ನೀಡಿದ್ದ ಬಂದ್ ವೇಳೆ  ಮಾತನಾಡಿದ ಅವರು, ಬಿ. ಎಸ್ ಯಡಿಯೂರಪ್ಪ ಆಧುನಿಕ ಹಿಟ್ಲರ್. ಮೋಸಗಾರ, ನಾನು ನನ್ನ ಕುಟುಂಬಸ್ಥರನ್ನು ಕಳೆದುಕೊಂಡಾಗ ಅಷ್ಟು ನೋವಾಗಿರಲಿಲ್ಲ. ಆದರೆ, ಯಡಿಯೂರಪ್ಪ ಅವರು ಮಾಡಿದ ಮೋಸದಿಂದ ಅತೀವ ನೋವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸರು ಮಫ್ತಿಯಲ್ಲಿ ತೆರಳಿ ಸುಮಾರು 30 ಸಾವಿರಕ್ಕೂ ಅಧಿಕ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ. ಕರ್ನಾಟಕ ಬಂದ್ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಬುಧವಾರ ಮತ್ತೆ ಸಭೆ ಸೇರಿ ಜೈಲ್ ಭರೋ ಚಳವಳಿಗಾಗಿ ಸಭೆ ನಡೆಸುತ್ತೇವೆ ಎಂದರು.

ಬಿಜೆಪಿ, ಆರ್ ಎಸ್ ಎಸ್ ಕನ್ನಡ ವಿರೋಧಿಗಳು. ಪೊಲೀಸರು 30 ಸಾವಿರ ಕನ್ನಡ ಪರ ಹೋರಾಟಗಾರರನ್ನು ಬಂಧಿಸಿದ್ದಾರೆ.  ನಗರ ಪೊಲೀಸ್ ಆಯುಕ್ತರಿಗೆ ನಾವೇಕೆ ಅನುಮತಿ ಕೇಳಬೇಕು, ಅವರು ಪರ ಭಾಷಿಕರು. ಅವರಿಗೆ ಕನ್ನಡ ಬರುವುದಿಲ್ಲ. ಮೊದಲು ಅವರನ್ನು ವರ್ಗಾವಣೆ ಮಾಡಬೇಕು ಎಂದರು.

ಮುಖ್ಯಮಂತ್ರಿಗಳು ರಾಜೀನಾಮೆ ‌ನೀಡಬೇಕು. ಪರಭಾಷಿಗರು ನಗರ ಪೊಲೀಸ್ ಆಯುಕ್ತರಾಗಬಾರದು. ಹೀಗಾಗಿ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಇಂದಿನ ಕರ್ನಾಟಕ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ.ಮರಾಠ ಅಭಿವೃದ್ಧಿ ನಿಗಮ ರಚನೆ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದರು‌.

ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ  ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸೇರಿದಂತೆ ಹಲವಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top