Connect with us

Dvgsuddi Kannada | online news portal | Kannada news online

ಭಾರತ್ ಬಂದ್ ಗೆ ದಾವಣಗೆರೆಯಲ್ಲಿ ಬೆಂಬಲ

ಪ್ರಮುಖ ಸುದ್ದಿ

ಭಾರತ್ ಬಂದ್ ಗೆ ದಾವಣಗೆರೆಯಲ್ಲಿ ಬೆಂಬಲ

ದಾವಣಗೆರೆ: ಕೇಂದ್ರ ಸರ್ಕಾರ ರೈತರ ವಿರೋಧಿ ಕಾಯ್ದೆ ವಾಪಸ್ ಪಡೆಯುವಂತೆ  ಆಗ್ರಹಿಸಿ  ಕರೆ ನೀಡಿರುವ ಭಾರತ  ಬಂದ್ ಗೆ   ದಾವಣಗೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಅಂಗಡಿಗಳು  ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಿ ರೈತರ ಪ್ರತಿ ಭಟನೆಗೆ ಬೆಂಬಲ ಸೂಚಿಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿ ರೈತ ಸಂಘ ಮತ್ತು ಹಸಿರುಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಪಿಬಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತ ಮುಖಂಡ ತೇಜಸ್ವಿ ಪಟೇಲ್‌  ಜನರಿಗೆ ಊಟದ ಪ್ಯಾಕೆಟ್‌ ಹಂಚುವ ಮೂಲಕ ‘ಅನ್ನ ತಿನ್ನುವವರು ಎಲ್ಲರೂ ಈ ಬಂದ್‌ಗೆ ಬೆಂಬಲ ನೀಡಬೇಕು’ ಎಂದು  ನಗರದಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಿದರು.

ರೈತ ಮುಖಂಡ ಬಣದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ಮಾಡಲಾಯಿತು.  ಕೆಲ ಕನ್ನಡ ಪರ ಸಂಘಟನೆ ಸಂಘಟನೆಗಳು ಜಯದೇವ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಇನ್ನು ಜಿಲ್ಲಾ ಕ್ರಾಂಗ್ರೆಸ್ ಸಮಿತಿಯಿಂದಲೂ ಪ್ರತಿಭಟನೆ ನಡೆಯಿತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top