ನಾಳೆ ಸಾರಿಗೆ ನೌಕರರ ಪ್ರತಿಭಟನೆ;  ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

 ಬೆಂಗಳೂರು: ರಾಜ್ಯದಲ್ಲಿನ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ  ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ನಾಳೆ (ಡಿ10) ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಗುರುವಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಜಾಥಾವು ನಾಳೆ ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಿ  ವಿಧಾನಸೌಧಧವರೆಗೆ ನಡೆಯಲಿದೆ. ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸಲಿದ್ದಾರೆ. ಈ ಕಾಲ್ನಡಿಗೆ ಜಾಥಾದಲ್ಲಿ ಸಾರಿಗೆ ನೌಕರರು ಅವರ ಹೆಂಡತಿ ಮಕ್ಕಳು ಭಾಗಿಯಾಗಲಿದ್ದಾರೆ.  ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ಎನ್ ಇಕೆಆರ್ ಟಿಸಿ ಸೇರಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಸಾರಿಗೆ ನೌಕರರು ಇದ್ದಾರೆ. ಈ ಜಾಥಾದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ ಹಾಗೂ ಚಂದ್ರಶೇಖರ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ.

ksrtc

ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ರಾಜ್ಯ ಸರ್ಕಾರ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವುದರಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾರಿಗೆ ನೌಕರರ ನವೆಂಬರ್ ವರೆಗಿನ ಎಲ್ಲಾ ವೇತನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಬಿ. ಹರ್ಷವರ್ಧನ್, ಕಳೆದ 3-4 ತಿಂಗಳಿಂದ ಸಾರಿಗೆ ನೌಕರರಿಗೆ ವೇತನ ನೀಡಿಲ್ಲ ಎಂಬ ಆರೋಪವಿದೆ, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರಿಗೆ ಇಲಾಖೆಯ 1.30 ಲಕ್ಷ ನೌಕರರ ನವೆಂಬರ್ ವರೆಗಿನ ವೇತನವನ್ನು ನೀಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ 4 ನಿಗಮಗಳು ಸಂಕಷ್ಟದಲ್ಲಿದ್ದಾಗ ನೌಕರರ ವೇತನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು, ಅದರಂತೆ ಮುಖ್ಯಮಂತ್ರಿ ಹಣಕಾಸು ಸೌಲಭ್ಯ ಒದಗಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಹಣಕಾಸು ಇಲಾಖೆ 7 ತಿಂಗಳ ಸಂಬಳವನ್ನು ನೀಡಿದೆ. 2 ತಿಂಗಳ ವೇತನ ಶೇಕಡಾ 100ರಷ್ಟು, 4 ತಿಂಗಳ ವೇತನ 25-75ರ ಅನುಪಾತದಲ್ಲಿ, ಮತ್ತೆ ಎರಡು ತಿಂಗಳ ವೇತನ 50-50 ಅನುಪಾತದಲ್ಲಿ ಸರ್ಕಾರ ಕೊಟ್ಟಿದೆ. ನವೆಂಬರ್ ವರೆಗೆ ಎಲ್ಲರ ವೇತನ ನೀಡಲಾಗಿದೆ, ಡಿಸೆಂಬರ್ ತಿಂಗಳ ವೇತನ 8-10 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಯಾರಿಗೂ ವೇತನ ಬಾಕಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿಕ್ರಿಯಿಸಿದ ಲಕ್ಷ್ಮಣ ಸವದಿ, ಈ ಹಿಂದೆ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು.  ಸ್ವತಃ ತಾವು ಅಲ್ಲಿಗೆ ಭೇಟಿ ನೀಡಿ ಮನವಿ ಸ್ವೀಕರಿಸಿದದ್ದೇವೆ.  ಕೋವಿಡ್ ಹಿನ್ನೆಲೆಯಲ್ಲಿ ಹಣಕಾಸು ಸಮಸ್ಯೆ ಇರುವುದರಿಂದ ಈಗ ಈ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಿರ್ಣಯ ಮಾಡುತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಮಾಡಿದರೆ, ಉಳಿದ ನಿಗಮಗಳಲ್ಲಿ ಅನೇಕ ಮಂದಿ ಇದೇ ಬೇಡಿಕೆ ಇಡಬಹುದು. ಆದ್ದರಿಂದ ಸದ್ಯಕ್ಕೆ ಸರ್ಕಾರದ ಮುಂದೆ ಅವರನ್ನು ಸರ್ಕಾರಿ ನೌಕರರಾಗಿ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *