Connect with us

Dvgsuddi Kannada | online news portal | Kannada news online

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ; ಡಿ. 12ರಂದು ದಾವಣಗೆರೆಯಲ್ಲಿ ಪೂರ್ವಭಾವಿ ಸಭೆ  

ದಾವಣಗೆರೆ

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ; ಡಿ. 12ರಂದು ದಾವಣಗೆರೆಯಲ್ಲಿ ಪೂರ್ವಭಾವಿ ಸಭೆ  

ದಾವಣಗೆರೆ: ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿಗೆ ಆಗ್ರಹಿಸಿ  ಡಿ.15 ರಂದು ಕಾಗಿನೆಲೆಯಿಂದ ಬೆಂಗಳೂರಿನವರೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮಿಜಿಯವರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆ ಹಿನ್ನೆಲೆ ನಗರದ ಬೀರಲಿಂಗೇಶ್ವರ ಛತ್ರದಲ್ಲಿ ಡಿ.12 ರಂದು ಬೆಳಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡ ಬಿ.ಎಂ ಸತೀಶ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ಸಮಾಜ ಬಾಂಧವರಲ್ಲಿ ಜಾಗೃತಿ ಸಮಾವೇಶಗಳನ್ನು ರಾಜ್ಯಾದ್ಯಂತ ನಡೆಸಲಾಗುವುದು. ಜ.3ರಂದು ಗುಲ್ಬರ್ಗ, ಜ.4  ರಾಯಚೂರು, ಜ.7 ಶಿಕಾರಿಪುರದಲ್ಲಿ  ಕಾಗಿನೆಲೆ ಮಠಾಧೀಶರು, ಎಸ್.ಟಿ ಹೋರಾಟ ಸಮಿತಿ ಹಾಗೂ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ  ಹೋರಾಟ ನಡೆಯುತ್ತಿದ್ದು, ಲಕ್ಷಾಂತರ ಸಮುದಾಯದ ಬಂಧುಗಳು ಭಾಗವಹಿಸಲಿದ್ದಾರೆ.

ಚಿತ್ರದುರ್ಗ, ದಾವಣಗೆರೆ, ಹಾವೇರಿ ಈ ಮೂರು ಜಿಲ್ಲೆಗಳಿಂದ ಕೂಡಿ ದಾವಣಗೆರೆಯಲ್ಲಿ ಬೃಹತ್ ಜಾಗೃತಿ ಸಮಾವೇಶವನ್ನು ಏರ್ಪಡಿಸುವ ಉದ್ದೇಶದಿಂದ ಡಿ.12 ರಂದು ಸಭೆ ಹಮ್ಮಿಕೊಳ್ಳಲಾಗಿದೆ. ಈ ಸಭೆಗೆ ಕಾಗಿನೆಲೆ ಸ್ವಾಮೀಜಿಗಳು,ಹೊಸದುರ್ಗದ ಸ್ವಾಮೀಜಿ,ಸಚಿವ ಕೆ.ಎಸ್ ಈಶ್ವರಪ್ಪ, ಮಾಜಿ ಸಚಿವ ಹೆಚ್ . ವಿಶ್ವನಾಥ್,ಹೆಚ್.ಎಂ ರೇವಣ್ಣ,ಎಸ್.ಟಿ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಕೆ ಮುಕುಡಪ್ಪ ಭಾಗವಹಿಸಲಿದ್ದಾರೆ ಎಂದರು.

ಕುರುಬ ಸಮುದಾಯದ ಶೇ 40 ರಷ್ಟು ಮಂದಿ ಇಂದಿಗೂ ಗುಡ್ಡಗಾಡು ಪ್ರದೇಶದಲ್ಲಿ ಕುರಿಮೇಯಿಸುತ್ತಿದ್ದಾರೆ.  ಕಂಬಳಿ ನೇಯುತತ್ತಿದ್ದು,  ಶೈಕ್ಷಣಿಕ,ಆರ್ಥಿಕವಾಗಿ ಸಾಕಷ್ಟು ಹಿಂದುಳಿದಿದ್ದಾರೆ. ಈ ಸಮಾಜದ ಅಭಿವೃದ್ಧಿಗೆ ಎಸ್.ಟಿ ಮೀಸಲಾತಿ ನೀಡುವ ಅಗತ್ಯವಿದೆ ಅದಕ್ಕಾಗಿ ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top