ಬೆಂಗಳೂರು: ಸಾರಿಗೆ ನೌಕರರನ್ನು ಸದ್ಯ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸಾಧ್ಯವಿಲ್ಲ. ನೌಕರರು ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮನವೊಲಿಕೆ ಮೂಲಕ ಕರೆ ತರಲು ಯತ್ನಿಸುತ್ತೇವೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮ ಹಣಕಾಸಿನ ಇತಿಮಿತಿಯೊಳಗೆ ಬೇಡಿಕೆ ಈಡೇರಿಸುವ ಯತ್ನ ಮಾಡುತ್ತೇವೆ. ಆದರೆ ಸಾರಿಗೆ ನೌಕರರ ಈ ಮುಷ್ಕರದ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ, ಆಸ್ತಿ-ಪಾಸ್ತಿ ಹಾನಿ ಮಾಡಲಾಗಿದೆ ಎಂದರು.
ಸಾರಿಗೆ ಸಿಬ್ಬಂದಿಗಳು ನಮ್ಮ ಕುಟುಂಬವಿದ್ದಂತೆ. ಅನಗತ್ಯವಾಗಿ ಅವರು ಮುಷ್ಕರ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರರಿಯಲ್ಲ.ಇಂದು ನೌಕರರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಸಂಜೆ ವೇಳೆಗೆ ವಸ್ ಗಳ ಸಂಚಾರ ಆರಂಭವಾಗಲಿದೆ ಎಂದರು.



