ಮೈಸೂರು: ನಮ್ಮ ದೇಶದಿಂದ ಗೋಮಾಂಸ ರಫ್ತುಮಾಡುವವರಲ್ಲಿ ಮೇಲ್ವರ್ಗದವರು, ಬ್ರಾಹ್ಮಣರೇ ಹೆಚ್ಚು ಇದ್ದಾರೆ. ಇಲ್ಲಿ ಗೋಹತ್ಯೆ ನಿಲ್ಲಿಸಿ ಹೊರ ದೇಶಗಳಿಗೆ ರಫ್ತು ಪ್ರಮಾಣ ಹೆಚ್ಚಿಸುವ ಹುನ್ನಾರ ಇದರ ಹಿಂದೆ ಇದೆ. ಇದು ಸರಿಯಾದ ಕ್ರಮ ಅಲ್ಲ ಎಂದರು.
ರೈತರು ಅನುಪಯುಕ್ತವಾದ ದನ, ಎಮ್ಮೆ, ಇತರ ಜಾನುವಾರುಗಳನ್ನು ಇಟ್ಟುಕೊಳ್ಳಲು ಇಷ್ಟಪಡುವುದಿಲ್ಲ. ಏಕೆಂದರೆ ಅದು ಆರ್ಥಿಕವಾಗಿ ಹೊರೆಯಾಗುತ್ತದೆ. ಅದನ್ನು ಸಾಕುವುದು ಕಷ್ಟ. ಆದ್ದರಿಂದ ಅವುಗಳನ್ನು ಮಾರಾಟ ಮಾಡುವರು. ಜಾನುವಾರುಗಳ ವಿಚಾರದಲ್ಲಿ ಹಳ್ಳಿಯ ರೈತರು ಯಾವುದೇ ಭಾವುಕವಾದ ವಿಚಾರಗಳನ್ನು ಇಟ್ಟುಕೊಂಡಿಲ್ಲ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು.
ಗೋಮಾಂಸದ ರಫ್ತು ಪ್ರಮಾಣವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧಕ್ಕೆ ಮುಂದಾಗಿದೆ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮಂಗಳವಾರ ಇಲ್ಲಿ ಆರೋಪಿಸಿದರು ಎಂದರು.



