ಸಿದ್ದರಾಮಯ್ಯ ಸ್ವಾಗತಕ್ಕೆ ಕ್ಷಣ ಗಣನೆ ಶುರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ಹರಿಹರ: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಹರಿಹರಕ್ಕೆ ಆಗಮಿಸಲಿದ್ದು, ಸಿದ್ದರಾಮಯ್ಯ ಸ್ವಾಗತಕ್ಕೆ ಜಿಲ್ಲಾ ಕಾಂಗ್ರೆಸ್ ಸೇರಿದಂತೆ ಹರಿಹರ ತಾಲ್ಲೂಕು ಘಟಕ ಭರದ ಸಿದ್ಧತೆ ಮಾಡಿಕೊಂಡಿದ್ದು, ಸ್ವಾಗತಕ್ಕೆ ಕ್ಷಣ ಗಣನೆ ಶುರುವಾಗಿದೆ.ಮಿನಿ ವಿಧಾನಸೌಧದ ಬಳಿ ನಿರ್ಮಿಸಿರುವ  ಇಂದಿರಾ ಕ್ಯಾಂಟೀನ್ ಅನ್ನು ಶಾಸಕ ರಾಮಪ್ಪ ನಿನ್ನೆ ರಾತ್ರಿ ಭೇಟಿ ನೀಡಿ ಪರಿಶೀಲಿಸಿದರು.

siddaramaiah

ಸಿದ್ಧರಾಮಯ್ಯ ಅವರ ನೆಚ್ಚಿನ ಯೋಜನೆಗಳಲ್ಲಿ ಒಂದಾದ  ಇಂದಿರಾ ಕ್ಯಾಂಟೀನ್  ಉದ್ಘಾಟನೆಗೆ ಹರಿಹರಕ್ಕೆ ಆಗಮಿಸಲಿದ್ದು, ಇದೇ ವೇಳೆ ವಾಲ್ಮೀಕಿ  ಜಯಂತಿಯನ್ನು ಹರಿಹರದಲ್ಲಿಯೇ ಆಚರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಹರಿಹರ ನಗರಕ್ಕೆ ಕಾಂಗ್ರೆಸ್ ಮತ್ತು ಸಿದ್ಧರಾಮಯ್ಯ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಬರುವ ಸಾಧ್ಯತೆ ಇದೆ.

harihara dvgsuddi 2

ಪಕ್ಕಿರಸ್ವಾಮಿ ಮಠದಿಂದ ತೆರದ ವಾಹನದಲ್ಲಿ ಹರಿಹರದ ಪ್ರಮುಖ ಬೀದಿಯಲ್ಲಿ  ಸಿದ್ದರಾಮಯ್ಯ ಮೆರವಣಿಗೆ ನಡೆಯಲಿದ್ದು, ಇಂದಿರಾ ಕ್ಯಾಂಟೀನ್ ಉದ್ಘಾಟನೆ ನಂತರ  ಹಳೆ ಪಿ.ಬಿ ರಸ್ತೆಯ ಬೃಹತ್‌ ವೇದಿಕೆಯಲ್ಲಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ,  ಮಾಜಿ ಸಚಿವರಾದ ಜಮೀರ್ ಅಹ್ಮದ್, ಹೆಚ್. ಆಂಜನೇಯ, ಎಸ್.ಎಸ್.ಮಲ್ಲಿಕಾರ್ಜುನ, ಎಂ.ಎಲ್.ಸಿ ಅಬ್ದುಲ್ ಜಬ್ಬಾರ್, ಮೋಹನ್ ಕೊಂಡಜ್ಜಿ, ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ಕಾಂಗ್ರೆಸ್  ಪಕ್ಷದ ಮುಖಂಡರುಗಳು ಭಾಗವಹಿಸಲಿದ್ದು, ಶಾಸಕ ಎಸ್. ರಾಮಪ್ಪನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

harihara dvgsuddi 3

ತಾಲ್ಲೂಕು ಘಟಕದ ಎಸ್.ಎಂ. ವಸಂತ, ನಾಗರತ್ನಮ್ಮ, ಶಂಕರ್ ಖಟಾವಕರ್, ಜಿ.ಪಂ ಮಾಜಿ ಸದಸ್ಯ ಎನ್. ನಾಗೇಂದ್ರಪ್ಪ, ಮುಖಂಡರಾದ ಬಿ.ರೇವಣಸಿದ್ದಪ್ಪ, ಗೀತಾ ಕದರಮಂಡಲಗಿ, ನಿಖಿಲ್ ಕೊಂಡಜ್ಜಿ, ಅಮರಾವತಿ ರೇವಣಸಿದ್ದಪ್ಪ ಭಾಗ್ಯದೇವಿ, ವಿದ್ಯಾರಾಣಿ ಸೇರಿದಂತೆ ಸಾವಿರಾರು ಸಿದ್ಧರಾಮಯ್ಯ ಅಭಿಮಾನಿಗಳು ಭಾಗಿಯಾಗಲಿದ್ದಾರೆ.

 

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *