Connect with us

Dvgsuddi Kannada | online news portal | Kannada news online

ಮೂರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ; 13 ಸ್ಥಳದಲ್ಲಿ ಶೋಧ

ಪ್ರಮುಖ ಸುದ್ದಿ

ಮೂರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ; 13 ಸ್ಥಳದಲ್ಲಿ ಶೋಧ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದ  ಹಿನ್ನೆಲೆ ಮೂವರು ಸರ್ಕಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿದೆ. ಇಂದು ಬೆಳಿಗ್ಗೆ ಮೈಸೂರು, ಮಂಡ್ಯ, ಹಾಸನ ಮತ್ತು ಬೆಳಗಾವಿ ಜಿಲ್ಲೆಗಳ ಹೀಗೆ 13 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಹಾಸನ ಕಚೇರಿಯ ಸಹಾಯಕ‌ ಎಂಜಿನಿಯರ್ ಅಶ್ವಿನಿ, ಲೋಕೋಪಯೋಗಿ ಇಲಾಖೆಯ ಬೆಳಗಾವಿ ನಂ.1 ವಿಭಾಗದ ಸಹಾಯಕ‌ ಎಂಜಿನಿಯರ್ ಮನೋಜ್ ಸುರೇಶ್ ಕವಳೇಕರ್  ಮತ್ತು ಮೈಸೂರಿನ ಶ್ರೀಗಂಧದ ಕೋಠಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರಸ್ವಾಮಿ ವಿರುದ್ಧ ಪ್ರಕರಣ ಎಸಿಬಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಶಿವಶಂಕರಸ್ವಾಮಿ ಅವರ ಮೈಸೂರಿನ ಮನೆ, ಮೈಸೂರಿನಲ್ಲಿರುವ ಅವರ ಮಾವನ ಮನೆ, ಸ್ನೇಹಿತನ ಮನೆ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮೂಗನೂರಿನಲ್ಲಿರುವ ತಂದೆಯ ಮನೆ ಹಾಗೂ ಶ್ರೀಗಂಧದ ಕೋಠಿಯಲ್ಲಿ ಶೋಧ ನಡೆಸಲಾಗುತ್ತಿದೆ.ಅಶ್ವಿನಿ ಅವರ ಹಾಸನದ ಮನೆ, ಕಚೇರಿ ಮತ್ತು ತಂದೆಯ ಮನೆ ಮೇಲೆ‌ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೋಜ್ ಸುರೇಶ್ ಕವಳೇಕರ್ ವಿರುದ್ಧದ ಪ್ರಕರಣದಲ್ಲಿ ಆರೋಪಿ ಅಧಿಕಾರಿಯ ಮನೆ, ಖಾನಾಪುರ ತಾಲ್ಲೂಕಿನ ಸಂಗರಗಾಳಿ ಗ್ರಾಮದಲ್ಲಿರುವ ತೋಟದ ಮನೆ, ಬೆಳಗಾವಿ ನಗರದಲ್ಲಿರುವ ಇಬ್ಬರು ಸಹೋದರಿಯರ ಮನೆ ಮತ್ತು ಕಚೇರಿಯ ಮೇಲೆ ದಾಳಿ‌ಮಾಡಿದ್ದು, ಶೋಧ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top