ನನ್ನ ಸೋಲಿಗೆ ಬಿಜೆಪಿ, ಜೆಡಿಎಸ್ ಜೊತೆ ಕಾಂಗ್ರೆಸ್ ಕೂಡ ಕಾರಣ; ಪಕ್ಷ ವಿರೋಧಿಗಳು ಪಕ್ಷ ಬಿಟ್ಟು ಹೊರ ಹೋಗಲಿ:  ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಮೈಸೂರು: ನನ್ನ ಸೋಲಿಗೆ ಜೆಡಿಎಸ್ ಮತ್ತು ಬಿಜೆಪಿ ಜತೆಗೆ ನಮ್ಮ ಪಕ್ಷದವರೂ ಕಾರಣ. ಪಕ್ಷ ವಿರೋಧಿಗಳು ಆತ್ಮಾವಲೋಕನ ಮಾಡಿಕೊಂಡು ಕಾಂಗ್ರೆಸ್​ನಿಂದ ಹೊರ ಹೋಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಅವರು ಚಾಮುಂಡೇಶ್ವರಿ ಸೋಲಿನ ಮೆಲುಕು ಹಾಕಿದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ನಾನು ಚುನಾವಣೆಯಲ್ಲಿ ಸೋತ ಮೇಲೆ ಕ್ಷೇತ್ರದ ಕಾರ್ಯಕರ್ತರ ಸಭೆ ಮಾಡಲು ಆಗಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ ನಿಜ. ಹಾಗೇ ನನಗೆ ಹೆಚ್ಚು ಮಾನಸಿಕ ವೇದನೆ ಕೊಟ್ಟ ಕ್ಷೇತ್.  ನಾನು ಬಾದಾಮಿಯಲ್ಲಿ ಗೆಲ್ಲದಿದ್ದರೆ ನನ್ನ ರಾಜಕೀಯ ಭವಿಷ್ಯವೇ ಮಂಕಾಗಿ ಹೋಗುತ್ತಿತ್ತು. ನಾನು ಮತ್ತೆ ಚುನಾವಣೆಗೆ ನಿಲ್ಲುತ್ತೇನೋ, ಇಲ್ಲವೋ ಗೊತ್ತಿಲ್ಲ. ಆದರೆ,  ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಮರ್ಮಾಘಾತ ಮಾತ್ರ ಸಹಿಸಿಕೊಳ್ಳಲು ಆಗ್ತಿಲ್ಲ ಎಂದರು.

 

ಚುನಾವಣೆ ವೇಳೆ ನಾನು ಬಾದಾಮಿಗೆ ಹೋಗಲಿಲ್ಲ. ಅಲ್ಲಿನ ಜನ ನನ್ನನ್ನು ಗೆಲ್ಲಿಸಿಕೊಂಡು ಬಂದರು.  ನೀವು ಸೋಲಿಸಿದ ಹಾಗೇ ಅವರೂ ಸೋಲಿಸಿದ್ದರೆ ನನ್ನ ರಾಜಕೀಯ ಭವಿಷ್ಯವೇ ಮಂಕಾಗಿ ಹೋಗುತ್ತಿತ್ತು. ಈ ರಾಜ್ಯದ ಭವಿಷ್ಯ ಏನಾಗುತ್ತಿತ್ತು? ನಾನು ಗೆದಿದ್ದರೆ ಮತ್ತೊಮ್ಮೆ ಸಿಎಂ ಆಗುತ್ತಿದ್ದನೇನೋ.., ಮತ್ತೆ ಸಿಎಂ ಆಗುವಂತಹ ಅವಕಾಶವೂ ಇತ್ತು. ಆದರೆ,  ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನನ್ನು ಸೋಲಿಸಿದ್ರು ಎಂದು  ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

 

2006ರ ಉಪ ಚುನಾವಣೆಯಲ್ಲಿನ ಗೆಲುವಿನ ಋಣ ತೀರಿಸೋಕೆ ಬಂದಿದ್ದೆ. ಅದು ನನ್ನ ಕೊನೇ ಚುನಾವಣೆ ಅಂದುಕೊಂಡು ಸ್ಪರ್ಧೆ ಮಾಡಿದ್ದೆ. ಆದರೆ ಚಾಮುಂಡೇಶ್ವರಿ  ಜನರು ನನ್ನನ್ನು ತಿರಸ್ಕಾರ ಮಾಡಿಬಿಟ್ಟರು. ಯಾವ ಕಾರಣಕ್ಕೆ ಈ ರೀತಿ ಮಾಡಿದ್ರೆ ಅಂತ ನೀವೇ ಒಮ್ಮೆ ಯೋಚನೆ ಮಾಡಿ ಎಂದು ಕಾರ್ಯಕರ್ತರಿಗೆ ಕೇಳಿದರು.

 

ನನ್ನ ಸೋಲಿಗೆ ಸ್ವಪಕ್ಷದ ಕೆಲವರೂ ಕಾರಣ. ಯಾರು ಪಕ್ಷದ ವಿರುದ್ಧ ಕೆಲಸ ಮಾಡುತ್ತಾರೋ ಅವರಂಥ ಖಳನಾಯಕರು. ಪಕ್ಷ ತಾಯಿ ಸಮಾನ, ಅಂತಹ ತಾಯಿಯನ್ನು ಬಿಟ್ಟು ಪಕ್ಷ ದ್ರೋಹಿಗಳು ಹೋಗಬೇಕು. ಇಲ್ಲಿ ಯಾರೂ ಪಕ್ಷಗಳಿಗೆ ಅನಿವಾರ್ಯವಲ್ಲ.  ವ್ಯಕ್ತಿಗಳಿಗೆ ಪಕ್ಷ ಅನಿವಾರ್ಯ. ಚಾಮುಂಡೇಶ್ವರಿಯಲ್ಲಿ ಯಾರಾದರೂ ಒಬ್ಬ ಪರ್ಯಾಯ ಲೀಡರ್ ಹುಟ್ಟಿಕೊಳ್ಳುತ್ತಾರೆ. ಅದರ ಬಗ್ಗೆ ನೀವು ಯೋಚನೆ ಮಾಡಬೇಡಿ. ನಾನಾಗಲಿ, ಮತ್ತೊಬ್ಬನಾಗಲಿ ಇದ್ದೇ ಇರ್ತಾರೆ. ಚಾಮುಂಡೇಶ್ವರಿಯಲ್ಲಿ ಎಂಎಲ್‌ಎ ಆಗಲು ಸಾಕಷ್ಟು ಜನ ಅರ್ಹರಿದ್ದಾರೆ. ಕಳೆದ ಬಾರಿ ಆ ನರಸೇಗೌಡನಿಗೆ ಗೆಲ್ತೀಯಾ ನಿಂತ್ಕೋ ಅಂದೆ. ಅವನೇ ನಿಲ್ಲಲಿಲ್ಲ. ಇಲ್ಲಿ ನಾಯಕತ್ವಕ್ಕೆ ಕೊರತೆ ಆಗಲ್ಲ. ಮೊದಲು ನೀವು ಗ್ರಾಪಂ ಚುನಾವಣೆಯಲ್ಲಿ ನಮ್ಮ‌ ಪಕ್ಷ  ಬೆಂಬಲಿತರನ್ನು ಗೆಲ್ಲಿಸಿಕೊಂಡು ಬನ್ನಿ. ಮುಂದೆ ತಾಲ್ಲೂಕು ಪಂಚಾಯ್ತಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ನಾನೇ ಬಂದು ಕ್ಯಾಂಪೇನ್  ಮಾಡುತ್ತೇನೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *