ಭರದಿಂದ ಸಾಗಿದ ಭದ್ರಾ ನಾಲೆಗಳ ಹೂಳು ಎತ್ತುವ ಕಾರ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ : ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ವ್ಯಾಪ್ತಿಯ ಹರಿಹರ ತಾಲ್ಲೂಕು ಮಲೇಬೆನ್ನೂರು ಹೋಬಳಿಯ ವಿವಿಧ ಭಾಗಗಳಲ್ಲಿ ನೀರಾವರಿ ಇಲಾಖೆ ಹಾಗೂ ಕಾಡ ಸಹಭಾಗಿತ್ವದಲ್ಲಿ ನಾಲೆ ಹೂಳು ಎತ್ತುವ ಕಾರ್ಯ ಭರದಿಂದ ಸಾಗಿದೆ. ಈ ಕಾಮಗಾರಿಯನ್ನುಇಂದು ಇಲಾಖೆಯ ಅಧಿಕಾರಿಗಳೊಂದಿಗೆ ಕಾಡಾ ಅಧ್ಯಕ್ಷೆ ಪವಿತ್ರರಾಮಯ್ಯ ವೀಕ್ಷಿಸಿದರು.

ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಕಾಡ ವ್ಯಾಪ್ತಿಗೊಳಪಡುವ ಅನೇಕ ಭಾಗಗಳಲ್ಲಿ ಪ್ರವಾಸ ಕೈಗೊಂಡ ಸಂಧರ್ಭದಲ್ಲಿ ಅಚ್ಚುಕಟ್ಟು ಭಾಗದ ರೈತರಿಗೆ ಸರಾಗವಾಗಿ ನೀರು ಹರಿಯುತ್ತಿಲ್ಲ ರೈತರು ದೂರು ನೀಡಿದ್ದರು.  ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕಳೆದ ವಾರ ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಜನವರಿ ತಿಂಗಳಲ್ಲಿ ಜಲಾಶಯದಿಂದ ಮತ್ತೊಮ್ಮೆ ಕಾಲುವೆಗಳಿಗೆ ನೀರು ಹರಿಸಲಿದ್ದು, ತಕ್ಷಣವೇ ಹೊಳು ತೆಗೆಯುವಂತೆ ಸೂಚಿಸಿದ್ದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಈ ವೇಳೆ ನೀರಾವರಿ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿಗಳು, ರೈತ ಮುಖಂಡ ಪಾಲಾಕ್ಷಪ್ಪ, ರುದ್ರಪ್ಪ ಗ್ರಾಮದ ಮುಖಂಡರು ಉಪಸ್ಥಿತಿರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *